ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ನಾಲ್ಕು ಜಿಲ್ಲೆಗಳಲ್ಲಿ ಕುರುಬ ಸಮುದಾಯವನ್ನು ಎಸ್.ಟಿ.ಗೆ ಸೇರಿಸುವಂತೆ ನಾನೇ ಶಿಫಾರಸು ಮಾಡಿದ್ದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ | ಪರ್ಮಿಷನ್ ಇರೋದು 23 ಕಲ್ಲು ಕ್ವಾರಿಗೆ ಮಾತ್ರ, ಇನ್ನುಳಿದ ಕಡೆ ಸ್ಫೋಟ ಹೇಗೆ?
ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ಕೊಡಗು ಜಿಲ್ಲೆಗಳಿಗೆ ಪರಿಶಿಷ್ಟ ಜಾತಿಗೆ ಸೇರಿಸುವ ನಿಟಿನಲ್ಲಿ ಕೆಲಸ ಮಾಡಿದ್ದೇನೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಕುಲಶಾಸ್ತ್ರೀಯ ಅಧ್ಯಯನಕ್ಕೆ ಶಿಫಾರಸು ಮಾಡಿದ್ದೆ ಎಂದರು.
ಎಸ್.ಟಿ. ಹೋರಾಟಕ್ಕೆ ರಾಣೆಬೆನ್ನೂರಿನ ಶಾಸಕರು 20 ಲಕ್ಷ ರೂಪಾಯಿ ನೀಡಿದ್ದಾರೆ. ಈಶ್ವರಪ್ಪ ಅವರ ಜತೆ ಆರ್.ಎಸ್.ಎಸ್. ಕೂಡ ಇದೆ. ಬಿಜೆಪಿ ನಾಯಕರು ದುಡ್ಡು ಕೊಟ್ಟಿದ್ದಾರೋ ಏನೋ ಗೊತ್ತಿಲ್ಲ. ಈಶ್ವರಪ್ಪ ಅವರು ಈ ಹಿಂದೆ ಆರಂಭಿಸಿದ್ದ ರಾಯಣ್ಣ ಬ್ರಿಗೇಡ್ ಏನಾಯ್ತು? ಎಂದು ಹೇಳಿದರು.
ಎಸ್.ಟಿ. ಹೋರಾಟದ ವಿಚಾರ ಸಮಾಜವನ್ನು ಒಡೆಯುವ ಪ್ರಯತ್ನ | ಕುರುಬ ಸಮುದಾಯವನ್ನು ಎಸ್.ಟಿ.ಗೆ ಸೇರಿಸುವುದಕ್ಕಾಗಿ ನಡೆಸುತ್ತಿರುವ ಹೋರಾಟ ಸಮಾಜವನ್ನು ಒಡೆಯುವ ಪ್ರಯತ್ನವಾಗಿದೆ. ಇದೊಂದು ಭಾವನಾತ್ಮಕ ವಿಚಾರವಾಗಿದೆ ಎಂದು ತಿಳಿಸಿದರು.
ಸಮಾಜದ ಈ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದಲ್ಲಿರುವ ಕುರುಬ ಸಮಾಜ ಮುಖಂಡರನ್ನು ಭಾಗವಹಿಸಬೇಡಿ ಎಂದು ಹೇಳಿಲ್ಲ. ಅವರವರ ಅಭಿಮಾನದ ಮೇಲೆ ಪಾಲ್ಗೊಳ್ಳುತ್ತಾರೆ. ಇದಕ್ಕೆ ನನ್ನಿಂದ ಯಾವುದೇ ರೀತಿಯ ವಿರೋಧವಿಲ್ಲ ಎಂದರು.