ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಜನವರಿ 31ರಂದು ಬೆಳಗ್ಗೆ 11 ಗಂಟೆಗೆ ನಗರದ ಡಿಎಆರ್ ಮೈದಾನದಲ್ಲಿ ಎಸ್.ಸಿ, ಎಸ್.ಟಿ ಕುಂದು ಕೊರತೆ ಸಭೆ ಆಯೋಜಿಸಲಾಗಿದೆ.
ಸಭೆಗೆ ಎಸ್.ಸಿ, ಎಸ್.ಟಿ ಜನಾಂಗದ ಸಾರ್ವಜನಿಕರು, ಸಂಘ, ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿ ತಮ್ಮ ಕುಂದು ಕೊರತೆ, ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.