ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಗುರುವಾರ ಸಂಜೆ ಆಯನೂರು ಸಮೀಪ ಶಿವಮೊಗ್ಗಕ್ಕೆ ಕಡೆಗೆ ಬರುತ್ತಿದ್ದ ಬೈಕ್ ಸವಾರ ಕೆಟ್ಟು ನಿಂತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತಪಟ್ಟ ವ್ಯಕ್ತಿಯನ್ನು 34 ವರ್ಷದ ಹರೀಶ್ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಒಬ್ಬನೇ ಶಿವಮೊಗ್ಗ ಕಡೆಗೆ ಬರುವಾಗ ಘಟನೆ ಸಂಭವಿಸಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.