ಸುದ್ದಿ ಕಣಜ.ಕಾಂ
ಶಿವಮೊಗ್ಗ: ಇಡೀ ಮಲೆನಾಡನ್ನೇ ನಡುಗಿಸಿದ ಹುಣಸೋಡು ಸ್ಫೋಟ ಪ್ರಕರಣ ಇನ್ನಷ್ಟು ಗಂಭೀರವಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ. ಇದಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಶಿವಮೊಗ್ಗದಲ್ಲಿ ಮಾತುಗಳೇ ಸಾಕ್ಷಿ.
ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಬುಧವಾರ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಣಸೋಡು ಪ್ರಕರಣದ ವಿಚಾರವಾಗಿ ವಿಧಾನಸಭೆಯಲ್ಲಿ ದನಿ ಎತ್ತುವುದಾಗಿ ಹೇಳಿದ್ದಾರೆ.
ಹೈಕೋರ್ಟ್ ಸಿಟಿಂಗ್ ಜಡ್ಜ್ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಕರಣ ಸತ್ಯಗಳು ಹೊರಬರಬೇಕಾದರೆ ಹೈಕೋರ್ಟ್ ಸಿಟಿಂಗ್ ಜಡ್ಜ್ ನೇತೃತ್ವದಲ್ಲಿ ತನಿಖೆ ನಡೆಯಲೇಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಉಪಸ್ಥಿತರಿದ್ದರು.