ಸುದ್ದಿ ಕಣಜ.ಕಾಂ
ಶಿವಮೊಗ್ಗ: ರೈತರ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಕೃಷಿ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನೀಡುವ ತೀರ್ಪಿಗೆ ನಾವು ಗೌರವಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ರೈತರ ಪರಿಸ್ಥಿತಿ ಸುಧಾರಿಸುವ ಉದ್ದೇಶದಿಂದ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿತ್ತು. ಆದರೆ, ಅದರಲ್ಲೂ ತಪ್ಪು ಹುಡುಕಲಾಗಿದೆ. ಇದು ಒಂಥರ ಮೊಸರಲ್ಲೂ ಕಲ್ಲು ಹುಡುಕಿದಂತೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸ್ವಾಮಿನಾಥನ್ ವರದಿಯ ಬೇಡಿಕೆ ಈಡೇರಿಸಿದ್ದೇವೆ: ಪ್ರಧಾನಿ ಮೋದಿ ಅವರು ರೈತರ ಬಗ್ಗೆ ಹೊಂದಿರುವ ಕಾಳಜಿ ಮತ್ತು ಒಲವು ಯಾರಿಗೂ ಅರ್ಥವಾಗುತ್ತಿಲ್ಲ. ಅನ್ನದಾತನ ಆದಾತ ದುಪ್ಪಟ್ಟುಗೊಳಿಸಿ ಅವರ ಕಷ್ಟಗಳನ್ನು ನೀಗಿಸುವ ಉದ್ದೇಶವಿದೆ. ಅದಕ್ಕಾಗಿ ಪ್ರಧಾನಿಗಳು ಯೋಜನೆ ರೂಪಿಸಿದ್ದಾರೆ ಎಂದು ಹೇಳಿದರು.
ಬಿಜೆಪಿ ನೇತೃತ್ವದ ಸರ್ಕಾರ ಸ್ವಾಮಿನಾಥನ್ ವರದಿಯ ಬಹುತೇಕ ಬೇಡಿಕೆಗಳನ್ನು ಈಡೇರಿಸಿದೆ. ರೈತರು ಬೆಳೆದ 28 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಈರಣ್ಣ ಕಡಾಡಿ ಉಪಸ್ಥಿತರಿದ್ದರು.