ಸುದ್ದಿ ಕಣಜ.ಕಾಂ
ಶಿವಮೊಗ್ಗ: ಇಡೀ ನಗರವನ್ನೇ ಬೆಚ್ಚಿ ಬೀಳಿಸಿದ್ದ, ಪ್ರತಿಕಾರದ ಮಟ್ಟಕ್ಕೆ ಹೋಗಿ ತಣ್ಣಗಾದ ಬಜರಂಗ ದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಬುಧವಾರ ಮತ್ತೆ ಸದ್ದು ಮಾಡಿದೆ. ಆದರೆ, ಈ ಸಲ ಎರಡೂ ಕೋಮಿನ ಮುಖಂಡರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ | ಭದ್ರಾವತಿ ತಾಲೂಕಿನ ಮೂವರು ಪಿಡಿಒಗಳ ಅಮಾನತು, ಕಾರಣವೇನು ಗೊತ್ತಾ?
ಹಿಂದೂ ಸಂಘಟನೆಯ ಮುಖಂಡರು ಕೋಟೆ ಪೊಲೀಸ್ ಠಾಣೆಯ ಮುಂದೆ ಧರಣಿ ಸತ್ಯಾಗ್ರಹ ನಡೆಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಅದನ್ನು ಬಿಟ್ಟು ಅಮಾಯಕ ಹಿಂದೂ ಯುವಕರನ್ನು ಬಂಧಿಸಲಾಗಿದೆ. ಅವರ ಮೇಲೆ 307 ಪ್ರಕರಣ ದಾಖಲಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಹಾಗೂ ಹಿಂದೂ ಸಂಘಟನೆ ಮುಖಂಡ ಎಸ್.ಎನ್.ಚನ್ನಬಸಪ್ಪ ಆರೋಪಿಸಿದ್ದಾರೆ.
ಧರಣಿಯಲ್ಲಿ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಬಳ್ಳಕೆರೆ ಸಂತೋಷ್, ದೀನ್ ದಯಾಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ | ಜನವರಿ 10ರಂದು ಶಿವಮೊಗ್ಗದಲ್ಲಿ ನಡೆಯಲಿದೆ ಶ್ವಾನ, ಬೆಕ್ಕು ಪ್ರದರ್ಶನ, ಕಂಪ್ಲೀಟ್ ಮಾಹಿತಿ ಇಲ್ಲಿದೆ
ಇನ್ನೊಂದು ಕಡೆ, ದೊಡ್ಡಪೇಟೆ ಮತ್ತು ಕೋಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಜನರನ್ನ ಬಂಧಿಸಲಾಗಿದೆ ಎನ್ನಲಾಗಿದೆ. ಆದರೆ ಬಂಧನದ ವಿಚಾರದಲ್ಲಿ ಎರಡೂ ಸಂಘಟನೆಗಳು ಪೆÇಲೀಸ್ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.
ದೊಡ್ಡಪೇಟೆ ಪೊಲೀಸ್ ಠಾಣೆಯ ಮುಂದೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಮುಸ್ಲಿಂ ಯುವಕರನ್ನು ರಾತ್ರಿ ವೇಳೆಯಲ್ಲಿ ಬಂದು ಬಂಧಿಸಲಾಗುತ್ತಿದೆ. ಅಮಾಯಕ ಮುಸ್ಲಿಂ ಯುವಕರನ್ನು ಬಂಧಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.