ಸುದ್ದಿ ಕಣಜ.ಕಾಂ
ತೀರ್ಥಹಳ್ಳಿ: ಪಟ್ಟಣ ಸಮೀಪದ ತುಡ್ಕಿ ಗ್ರಾಮದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಯಡಗುಡ್ಡೆ ಗ್ರಾಮದ ನಿವಾಸಿ ಸುಂದರ್ (61) ಎಂಬಾತ ಮೃತ ದುರ್ದೈವಿ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರಿಗೆ ಸಂಸ್ಥೆ ಬಸ್ ಚಾಲಕನನ್ನು ಬಂಧಿಸಲಾಗಿದೆ.