GOOD NEWS | ಶಿವಮೊಗ್ಗದಲ್ಲಿ ಶುರುವಾಗಲಿದೆ ಹೊಸ ಕೇಂದ್ರೀಯ ವಿದ್ಯಾಲಯ, ಪರಿಶೀಲನೆಗೆ ನಾಳೆ ಬರಲಿದೆ ಅಧಿಕಾರಿಗಳ ತಂಡ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹೊಸದಾಗಿ ಇನ್ನೊಂದು ಕೇಂದ್ರೀಯ ವಿದ್ಯಾಲಯವನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಇದನ್ನೂ ಓದಿ | ಗೋವಾದಲ್ಲೂ ಕನ್ನಡತನ ಸಾರಿದ ಕಿಚ್ಚ ಸುದೀಪ್

ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿದ ಅವರು, ಶಿವಮೊಗ್ಗ ನಗರಕ್ಕೆ ಇನ್ನೊಂದು ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡಲು ಕೇಂದ್ರ ಮಾನವ ಸಂಪನ್ಮೂಲ ಸಚಿವರಿಗೆ ಮನವಿಯನ್ನು ಮಾಡಲಾಗಿತ್ತು. ಇದಕ್ಕೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೊಸ ಕೇಂದ್ರೀಯ ವಿದ್ಯಾಲಯ ಆರಂಭಿಸುವ ಕುರಿತು ಪರಿಶೀಲನೆಗಾಗಿ ಹಿರಿಯ ಅಧಿಕಾರಿಗಳು ಮಂಗಳವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | ಆರ್.ಎ.ಎಫ್. ಶಿಲಾನ್ಯಾಸ ಫಲಕದಲ್ಲಿ ಕನ್ನಡ ಕೈಬಿಟ್ಟಿದ್ದಕ್ಕೆ ನೆಟ್ಟಿಗರು ಫುಲ್ ಗರಂ, ಸ್ವಾಭಿಮಾನಿ ಕನ್ನಡಿಗರ ಆಕ್ರೋಶ, ಡಿಕೆಶಿ, ಸಿದ್ದರಾಮಯ್ಯ ಹೇಳಿದ್ದೇನು?

ತ್ಯಾವರೆಚಟ್ನಳ್ಳಿಯಲ್ಲಿ ಸ್ಥಳ ಗುರುತು: ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಕೇಂದ್ರೀಯ ವಿದ್ಯಾಲಯ ಕಾರ್ಯಾರಂಭ ಮಾಡಲು ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಮಾಡಿದೆ. ತಾತ್ಕಾಲಿಕವಾಗಿ ನಗರದ ರಾಗಿಗುಡ್ಡದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತರಗತಿಯನ್ನು ಆರಂಭಿಸಲು ನಿರ್ಧರಿಸಿದೆ. ಹೊಸ ಕೇಂದ್ರೀಯ ವಿದ್ಯಾಲಯಕ್ಕೆ ತ್ಯಾವರೆ ಚಟ್ನಳ್ಳಿಯಲ್ಲಿ 5 ಎಕರೆ ಸ್ಥಳವನ್ನು ಗುರುತಿಸಲಾಗಿದೆ. ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಮುಂದಿನ ವರ್ಷದಿಂದ ಇಲ್ಲಿ ವಿದ್ಯಾಲಯ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

DRDO ಲ್ಯಾಬ್: ಜಿಲ್ಲೆಯಲ್ಲಿ DRDO ಲ್ಯಾಬ್ ಆರಂಭಿಸುವ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ, ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುವ ಘೋಷಣೆಯನ್ನು ಮಾಡಿದ್ದಾರೆ ಎಂದು ಹೇಳಿದರು.

error: Content is protected !!