ಸುದ್ದಿ ಕಣಜ.ಕಾಂ
ತೀರ್ಥಹಳ್ಳಿ: ತಾಲೂಕಿನ ಮೂವಳ್ಳಿ ಗ್ರಾಮದಲ್ಲಿ ವೃದ್ಧೆಯೊಬ್ಬರು ಶಂಕಾಸ್ಪದವಾಗಿ ಸಾವನ್ನಪ್ಪಿದ್ದು, ಎರಡು ದಿನಗಳ ಬಳಿಕ ಬೆಳಕಿಗೆ ಬಂದಿದೆ. ಇವರ ಶವವು ಕೊಟ್ಟಿಗೆಯ ರಾಶಿಯಲ್ಲಿ ಪತ್ತೆಯಾಗಿದೆ.
ಕಿವಿಯೋಲೆ ಕಳವು | ಚಿತ್ರದುರ್ಗ ಮೂಲದ 65 ವರ್ಷದ ಶಾರದಮ್ಮ ಮೃತಪಟ್ಟಿರುವ ವೃದ್ಧೆ. ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆಯ ಕಿವಿಯೋಲೆ ಕಳವಾಗಿದೆ. ಕಳೆದ ಮೂವತ್ತು ವರ್ಷಗಳಿಂದ ಮೂವಳ್ಳಿಯಲ್ಲಿಯೇ ವಾಸವಾಗಿದ್ದ ವೃದ್ಧೆಯು ಕಂಬಳಿ ವ್ಯಾಪಾರ ಮಾಡುತ್ತಿದ್ದರು. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.