ಸುದ್ದಿ ಕಣಜ.ಕಾಂ
ಶಿವಮೊಗ್ಗ: ಉತ್ತರ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಶಿವಮೊಗ್ಗದ ಪ್ರಗತಿಪರ ಸಂಘಟನೆಗಳು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದವು.
50 ವರ್ಷದ ಮಹಿಳೆ ಮೇಲೆ ದೇವಸ್ಥಾನದ ಅರ್ಚಕ ಪೈಶಾಚಿಕ ಕೃತ್ಯ ಎಸಗಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಉತ್ತರ ಪ್ರದೇಶದ ಸರ್ಕಾರವನ್ನು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ವಜಾಗೊಳಿಸಬೇಕು. ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪ್ರಗತಿಪರ ಸಂಘಟನೆ ಪ್ರಮುಖರಾದ ಕೆ.ಎಲ್.ಅಶೋಕ್, ವಕೀಲ ಅನಿಲ ಕುಮಾರ್, ಡಿ.ಎಸ್.ಶಿವಕುಮಾರ್, ಆರ್.ಕುಮಾರ್, ಕೃಷ್ಣಮೂರ್ತಿ ಪುರದಾಳ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.