ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಬೆಕ್ಕಿನಕಲ್ಮಠದಲ್ಲಿ ಜನವರಿ 28ರಂದು ಸಂಜೆ 5.30 ಗಂಟೆಗೆ ಲಿಂಗೈಕ್ಯ ಶ್ರೀ ಗುರುಬಸವ ಮಹಾಸ್ವಾಮಿಗಳವರ 109ನೇ ಪುಣ್ಯಸ್ಮರಣೋತ್ಸವ, ಶರಣ ಸಾಹಿತ್ಯ ಮತ್ತು ಭಾವೈಕ್ಯ ಸಮ್ಮೇಳನ ಏರ್ಪಡಿಸಲಾಗಿದೆ.
ಅಂದು ಬೆಳಗ್ಗೆ 10.30 ಗಂಟೆಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಬೆಕ್ಕಿನಕಲ್ಮಠ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ, ಗುತ್ತಲ ಕಲ್ಮಠದ ಪ್ರಭು ಮಹಾಸ್ವಾಮಿ, ಕವಲೇದುರ್ಗದ ಡಾ. ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿ, ಮೂಲೆಗದ್ದೆಯ ಅಭಿನವ ಚನ್ನಬಸವ ಮಹಾಸ್ವಾಮಿ, ಚೌಕಿಮಠದ ನೀಲಕಂಠ ಮಹಾಸ್ವಾಮಿಗಳ ಸಾನ್ನಿಧ್ಯ ವಹಿಸಲಿದ್ದಾರೆ. ಜಿಪಂ ಸಿಇಒ ಎಂ.ಎಲ್. ವೈಶಾಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಭಾವೈಕ್ಯ ಸಮ್ಮೇಳನ, ಶರಣ ಸಾಹಿತ್ಯ, ಮಾಸಿಕ ಶಿವಾನುಭವ ಗೋಷ್ಠಿ, ವಿವಿಧ ಸ್ಪರ್ಧೆಗಳು ನಡೆಯಲಿವೆ ಎಂದು ಬೆಕ್ಕಿನ ಕಲ್ಮಠ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಬೆಕ್ಕಿನಕಲ್ಮಠದ ವೆಬ್ ಸೈಟ್ ಬಿಡುಗಡೆ | ಸಂಜೆ 5.30 ಕ್ಕೆ ಶರಣ ಸಾಹಿತ್ಯ, ಭಾವೈಕ್ಯ ಸಮ್ಮೇಳನ ಹಾಗೂ ಮಾಸಿಕ ಶಿವಾನುಭವ ಗೋಷ್ಠಿಯ ವಿಜಯಪುರದ ಅಭಿನವ ಸಿದ್ಧಾರೂಢ ಮಹಾಸ್ವಾಮೀಜಿ ಅವರ ಸಮ್ಮುಖದಲ್ಲಿ ನಡೆಯಲಿದೆ. ಸಂಸದ ಬಿ.ವೈ. ರಾಘವೇಂದ್ರ ಅವರು ಶ್ರೀಮಠದ ವೆಬ್ ಸೈಟ್ ಹಾಗೂ ದಿನದರ್ಶಿಕೆ ಬಿಡುಗಡೆ ಮಾಡಲಿದ್ದಾರೆ.
ಜಯಶ್ರೀ, ಮೋಹನ್ ಆಳ್ವ ಅವರಿಗೆ ಪ್ರಶಸ್ತಿ | ರಂಗಭೂಮಿ ಕಲಾವಿದೆ ಬಿ. ಜಯಶ್ರೀ ಅವರಿಗೆ ಅಲ್ಲಮಪ್ರಭು ಪ್ರಶಸ್ತಿ ಹಾಗೂ ಡಾ. ಮೋಹನ್ ಆಳ್ವ ಅವರಿಗೆ ಗುರು ಬಸವಶ್ರೀ ಪ್ರಶಸ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಈ ವೇಳೆ, ಎಸ್.ಪಿ. ಕೆ.ಎಂ.ಶಾಂತರಾಜ್, ತ್ಯಾಜವಳ್ಳಿ ಕಾವ್ಯ ಆರ್. ರವಿ ಅವರನ್ನು ಸನ್ಮಾನಿಸಲಾಗುವುದು.
ಸ್ಮರಣೋತ್ಸವ ಸಮಿತಿ ಅಧ್ಯಕ್ಷೆ ಎಸ್.ವೈ. ಅರುಣಾದೇವಿ, ಕಾರ್ಯಾಧ್ಯಕ್ಷ ಎಚ್.ಎಂ. ಚಂದ್ರಶೇಖರಪ್ಪ, ಎಚ್.ವಿ. ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಶಾಂತಾ ಆನಂದ್, ರತ್ನಾ ಮಂಜುನಾಥ್, ಶಕುಂತಲಾ ಟಿ.ಬಿ. ಜಗದೀಶ್, ಕಿರಣ್ ದೇಸಾಯಿ, ಎನ್.ಜೆ. ರಾಜಶೇಖರ್, ಶಾಂತವೀರಪ್ಪ, ಪ್ರಚಾರ ಸಮಿತಿಯ ಅಧ್ಯಕ್ಷ ಚನ್ನಬಸಪ್ಪ ಉಪಸ್ಥಿತರಿದ್ದರು.