ಸುದ್ದಿ ಕಣಜ.ಕಾಂ
ಶಿವಮೊಗ್ಗ: ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಣಸೋಡು ಗ್ರಾಮಕ್ಕೆ ಭೇಟಿ ನೀಡಿದರು.
ಇದನ್ನೂ ಓದಿ । ವಿಧಾನಸಭೆಯಲ್ಲೂ ಮೊಳಗಲಿದೆ ಹುಣಸೋಡು ಸ್ಫೋಟದ ದನಿ
ಶಿವಮೊಗ್ಗದ ಸರ್ಕ್ಯೂಟ್ ಹೌಸ್ ನಲ್ಲಿಯ ಹೆಲಿಪ್ಯಾಡ್ ಆಗಮಿಸಿದ ಸಿದ್ದರಾಮಯ್ಯ ಹುಣಸೋಡು ಗ್ರಾಮದ ಸ್ಫೋಟಗೊಂಡ ಸ್ಥಳಕ್ಕೆ ಬುಧವಾರ ಭೇಟಿ ನೀಡಿದರು.
ಸ್ಟೋನ್ ಕ್ರಷರ್ ಇರುವ ಸ್ಥಳಕ್ಕೆ ಆಗಮಿಸಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಿದ್ದರಾಮಯ್ಯ ಬೇಡಿಕೆಗಳೇನು
- ಹುಣಸೋಡು ಬ್ಲಾಸ್ಟ್ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 302 ಅನ್ವಯ ಕೇಸ್ ಹಾಕಿ
- ಸ್ಫೋಟ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕ್ರಮವಹಿಸಲಿ
- ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಇಡೀ ಪ್ರಕರಣದ ತನಿಖೆ ನಡೆಯಲಿ
ಆತ್ಮೀಯವಾಗಿ ಸ್ವಾಗತ | ಬಳಿಕ ಗ್ರಾಮದ ನಿವಾಸಿಗಳ ಮನೆಗಳಿಗೆ ಭೇಟಿ ನೀಡಿ ಅವರಿಂದ ಅಹವಾಲುಗಳನ್ನು ಪಡೆದರು. ಗಣಿಗಾರಿಕೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ಆಲಿಸಿದರು. ಗ್ರಾಮಸ್ಥರು ಅತ್ಯಂತ ಆತ್ಮೀಯವಾಗಿ ಸಿದ್ದರಾಮಯ್ಯ ಅವರನ್ನು ಬರಮಾಡಿಕೊಂಡು ತಮ್ಮ ಸಮಸ್ಯೆಗಳನ್ನು ತೋಡಿಕೊಂಡರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಕೆ.ಬಿ.ಪ್ರಸನ್ನಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.