ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸೋಲಾರ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ಪೆಸಿಟ್ ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಡೆದ ಜನಸೇವಕ್ ಸಮಾವೇಶದಲ್ಲಿ ಭಾಗವಹಿಸಿ ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದವರಿಗೆ ಸನ್ಮಾನಿಸಿ ಮಾತನಾಡಿದರು.
ಸೋಲಾರ್ ಅಳವಡಿಕೆಯಿಂದ ರೈತರು, ಗ್ರಾಮಗಳ ಜನತೆಗೆ ಅನುಕೂಲವಾಗುತ್ತದೆ. ಪಂಚಾಯಿತಿಯಲ್ಲಿ ಎದುರಾಗುತ್ತಿರುವ ವಿದ್ಯುತ್ ಸಮಸ್ಯೆಯೂ ಇದರಿಂದ ಬಗೆಹರಿಸಲಿದೆ ಎಂದರು.
ತರಬೇತಿಯ ಲಾಭ ಪಡೆಯಲು ಸಲಹೆ: ಸರ್ಕಾರದ ಯೋಜನೆ ಮತ್ತು ಆಡಳಿತ ವ್ಯವಸ್ಥೆಯ ಕುರಿತು ಗ್ರಾಪಂ ಸದಸ್ಯರಿಗೆ ತರಬೇತಿ ನೀಡಲಾಗುವುದು. ನೂತನ ಸದಸ್ಯರಿಗೆ ತಿಳಿಸಲು 285 ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ । ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಪೋಕ್ಸೊ ಪ್ರಕರಣದ ಆರೋಪಿ ಅರೆಸ್ಟ್
ಸಂಸದ ಬಿ.ವೈ.ರಾಘವೇಂದ್ರ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಸದೆ ಶೋಭಾ ಕರಂದ್ಲಾಜೆ, ಎಂ.ಎಸ್.ಐ.ಎಲ್ ಅಧ್ಯಕ್ಷ ಹರತಾಳು ಹಾಲಪ್ಪ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ, ಶಾಸಕ ಕುಮಾರ್ ಬಂಗಾರಪ್ಪ, ಹೊಸನಗರ ಮಾಜಿ ಶಾಸಕ ಕೆ.ಜಿ.ಕುಮಾರ್ ಸ್ವಾಮಿ, ಶಾಸಕ ಅರಗ ಜ್ಞಾನೇಂದ್ರ, ಆಯನೂರು ಮಂಜುನಾಥ್, ಟಿ.ಡಿ.ಮೇಘರಾಜ್ ಉಪಸ್ಥಿತರಿದ್ದರು.