ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕಿನ ಹನಸವಾಡಿಯಲ್ಲಿ ಬೈಕ್ ವೊಂದು ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೊನ್ನಾಳಿಯ ಬಾಗೋಡಿ ಗ್ರಾಮದ ನಿವಾಸಿ ರಘು (24), ಶಿವಮೊಗ್ಗದ ಚಿಕಲ್ ನಿವಾಸಿ ಸುಮಾ (19) ಎಂಬುವವರು ಸಾವನ್ನಪ್ಪಿದ್ದಾರೆ.
ಹೇಗೆ ನಡೀತು ಅಪಘಾತ | ಶಿವಮೊಗ್ಗದ ಕಡೆಗೆ ಬರುವಾಗ ಕಾರ್ ಅನ್ನು ಹಿಂದಿಕ್ಕಲು ಹೋಗಿ ಎದುರುಗಡೆ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಜ್ಜುಗುಜ್ಜಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.