ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋಟೆಯ ರಸ್ತೆಯಲ್ಲಿ ಒಂಟಿ ಮಹಿಳೆಯೊಬ್ಬರ ತಾಳಿ ಸರ ದೋಚಿ ಪರಾರಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ.
ವರ್ಷಾ ವಿನಾಯಕ್ ಎಂಬುವವರೇ ಚಿನ್ನಾಭರಣ ಕಳೆದುಕೊಂಡ ಮಹಿಳೆ.
ಘಟನೆ ನಡೆದಿದ್ದು ಹೀಗೆ | ಕೋಟೆ ಶ್ರೀ ಸೀತಾರಾಮಾಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿ ಮನೆಗೆ ಹೋಗುವಾಗ ಗಮನೆ ಬೇರೆಡೆ ಸೆಳೆದು ತಾಳಿ ಸರ ದೋಚಲಾಗಿದೆ.
30 ಗ್ರಾಂ ಸರ ದೋಚಿ ಪರಾರಿ | ಅಂದಾಜು 1.25 ಲಕ್ಷ ರೂಪಾಯಿ ಮೌಲ್ಯದ 30 ಗ್ರಾಂ ಚಿನ್ನಾಭರಣವನ್ನು ದೋಚಲಾಗಿದೆ. ಕೋಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.