ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಗೋಪಿಶೆಟ್ಟಿ ಕೊಪ್ಪದ ಸಾಹಿತ್ಯ ಭವನದಲ್ಲಿ ಭಾನುವಾರ ಆರಂಭಗೊಂಡು ನುಡಿ ಜಾತ್ರೆಯ ಎರಡನೇ ದಿನವಾದ ಸೋಮವಾರ (ಫೆಬ್ರವರಿ 1) ವಿವಿಧ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ.
VIDEO REPORT
ಬೆಳಗ್ಗೆ 8.30 ಗಂಟೆಗೆ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ರಾಷ್ಟ್ರ ಧ್ವಜವನ್ನು ಹಾಗೂ ಉಪ ಮೇಯರ್ ಸುರೇಖಾ ಮುರುಳೀಧರ್ ನಾಡ ಧ್ವಜಾರೋಹಣ ನೆರವೇರಿಸುವರು. ಕಸಾಪ ಜಿಲ್ಲಾ ಗೌರವಾಧ್ಯಕ್ಷ ಎಂ.ಎನ್. ಸುಂದರರಾಜ್ ಪರಿಷತ್ತು ಧ್ವಜಾರೋಹಣ ನೆರವೇರಿಸುವರು.
ಬೆಳಗ್ಗೆ 9 ಗಂಟೆಯಿಂದ ಕಲಾವಿದರು ಗೀತಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಗೋಷ್ಠಿ 4 | ಬೆಳಗ್ಗೆ 9.30 ರಿಂದ 10.30 ಗಂಟೆಯವರೆಗೆ ಸಮ್ಮೇನಾಧ್ಯಕ್ಷರೊಂದಿಗೆ ಸಂವಾದ ನಡೆಯಲಿದೆ. ರುದ್ರಮುನಿ ಸಜ್ಜನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಗೋಷ್ಠಿ 5 | ಬೆಳಗ್ಗೆ 10.30 ರಿಂದ 12.30 ಗಂಟೆಯವರೆಗೆ ಜಿಲ್ಲೆಯ ತೆರೆ ಮರೆಯ ಹಿರಿಯ ಕೃತಿಕಾರರ ಕೃತಿ ದರ್ಶನ, ಸಂಸ್ಕøತ ವಿದ್ವಾಂಸ ವಿದ್ವಾನ್ ಎಸ್. ನಾರಾಯಣಭಟ್ಟರು ಅಧ್ಯಕ್ಷತೆ ವಹಿಸುವರು.
ಗೋಷ್ಠಿ 6 | ಮಧ್ಯಾಹ್ನ 12.30 ರಿಂದ 3 ಗಂಟೆವರೆಗೆ ತುಂಗಾ ನಹರಿವಿನಲ್ಲಿ ನೆಲೆಯೂರುತ್ತಿರುವ ಕೃತಿಕಾರರು: ಒಂದು ಅವಲೋಕನ, ವಿಶ್ರಾಂತ ಪ್ರಾಚಾರ್ಯ ಡಾ.ಗಜಾನನ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಗೋಷ್ಠಿ 7 | ಮಧ್ಯಾಹ್ನ 3 ಗಂಟೆಯಿಂದ 4.30ವರೆಗೆ ಕೊರೊನಾ ತಂದ ಆತಂಕಗಳು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಹೊನ್ನಾಳಿ ಅಧ್ಯಕ್ಷತೆ ವಹಿಸುವರು.
ಗೋಷ್ಠಿ 8 | ಸಂಜೆ 4.30 ಗಂಟೆಯಿಂದ 6ವರೆಗೆ ಕವಿ ಗೋಷ್ಠಿ, ತೀರ್ಥಹಳ್ಳಿ ತುಂಗಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಬಿ.ಗಣಪತಿ ಅಧ್ಯಕ್ಷತೆ ವಹಿಸುವರು.
ಸಾಂಸ್ಕೃತಿಕ ಸಂಜೆ | ಸಂಜೆ 6 ಗಂಟೆಯಿಂದ ಗೀತಾ ದಾತರ್ ಶಿಷ್ಯರಿಂದ ನೃತ್ಯ ಪ್ರದರ್ಶನ ನಡೆಯಲಿದೆ.