ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಶಿವಪ್ಪ ನಾಯಕ ವೃತ್ತದಿಂದ ಜಿಲ್ಲಾ ಯುವ ಕಾಂಗ್ರೆಸ್ ವಿನೂತನ ಪ್ರತಿಭಟನಾ ಮೆರವಣಿಗೆ ನಡೆಸಿತು.
ಎತ್ತಿನಗಾಡಿ, ಕುದುರೆಗಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಹಾಗೂ ಸೌದೆ, ದಿನಬಳಕೆ ವಸ್ತುಗಳನ್ನು ತಲೆಯ ಮೇಲೆ ಹೊತ್ತುಕೊಂಡು ಪ್ರತಿಭಟನೆ ಮಾಡಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್ ಡೀಸೆಲ್, ವಿದ್ಯುತ್, ಆಸ್ತಿ ತೆರಿಗೆ ಸೇರಿದಂತೆ ವಿವಿಧ ವಸ್ತುಗಳ ಬೆಲೆಯನ್ನು ಹೆಚ್ಚಿಸುತ್ತಲೇ ಇದ್ದಾರೆ. ಇದು ಜನಸಾಮಾನ್ಯರಿಗೆ ಭಾರಿ ಹೊರೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ರೈತರ ಹೋರಾಟಕ್ಕೆ ಸ್ಪಂದಿಸಿ ಕೂಡಲೇ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಮುಖಂಡರಾದ ವೈ.ಎಚ್.ನಾಗರಾಜ್, ಕಲಗೋಡು ರತ್ನಾಕರ್, ವಿಶ್ವನಾಥ್ ಕಾಶಿ, ಸಿ.ಎಸ್.ಚಂದ್ರ ಭೂಪಾಲ್, ಎಚ್.ಪಿ.ಗಿರೀಶ್, ಯಮುನಾ ರಂಗೇಗೌಡ, ಚಂದನ್, ವಿಜಯಲಕ್ಷ್ಮಿ ಪಾಟೀಲ್, ಕವಿತಾ, ಸುವರ್ಣ ನಾಗರಾಜ್, ಪಲ್ಲವಿ ಭಾಗವಹಿಸಿದ್ದರು.