ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಅವರು ಫೆಬ್ರವರಿ 15ರಂದು ಶಿವಮೊಗ್ಗಕ್ಕೆ ಬರುವುದು ಪಕ್ಕಾ ಆಗಿದೆ.
ಅಂದು ಗೋಯೆಲ್ ಅವರು ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಆನ್ ಲೈನ್ ಮೂಲಕ ಚಾಲನೆ ನೀಡುವರು.
ಎಲ್ಲೆಲ್ಲಿ ರೈಲ್ವೆ ಮೇಲ್ಸೇತುವೆ | ಸವಳಂಗ ರಸ್ತೆ, ಭದ್ರಾವತಿಯ ಕಡದಕಟ್ಟೆ, ಕಾಶೀಪುರ ಬಳಿ ಮೇಲ್ಸೇತುವೆ ಹಾಗೂ ವಿದ್ಯಾನಗರದಲ್ಲಿ ಮೇಲ್ಸೇತುವೆ ಮತ್ತು ಕೆಳಸೇತುವೆಗೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗಕ್ಕೆ ಬರಲಿದ್ದಾರೆ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, ಕಾರಣವೇನು ಗೊತ್ತಾ
ಈ ಬಗ್ಗೆ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಡಿದ ಅವರು, ಅಂದಾ 11 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಕೆ.ಎಸ್.ಈಶ್ವರಪ್ಪ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.