ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಾನಗರ ಪಾಲಿಕೆಯ 2021-22ನೇ ಸಾಲಿನ ಆಯ ವ್ಯಯವನ್ನು ತಯಾರಿಸುವ ಬಗ್ಗೆ ಫೆಬ್ರವರಿ 12ರಂದು ಬೆಳಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ. ಪಾಲಿಕೆ ಮೇಯರ್ ಸುವರ್ಣ ಶಂಕರ್ ಅಧ್ಯಕ್ಷತೆಯಲ್ಲಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಮೊದಲನೇ ಹಂತದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.
ನಗರದ ನಾಗರೀಕರು ಹಾಗೂ ಸಂಘ-ಸಂಸ್ಥೆಯವರು ಈ ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಕೋರಿದ್ದಾರೆ.