ಸುದ್ದಿ ಕಣಜ.ಕಾಂ
ಶಿವಮೊಗ್ಗ: ಈ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೇಲೆ ಇದೇ ಮೊದಲ ಸಲ ಇಷ್ಟೊಂದು ದೀರ್ಘ ಅವಧಿಯವರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಫೆಬ್ರವರಿ 14ರಂದು ಸಂಜೆ 5 ಗಂಟೆಗೆ ಶಿಕಾರಿಪುರಕ್ಕೆ ಬರಲಿದ್ದಾರೆ. ಅಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಅಲ್ಲಿಯೇ ವಾಸ್ತವ್ಯವಿರಲಿದೆ.
ಫೆಬ್ರವರಿ 15ರಂದು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ರಸ್ತೆ ಮಾರ್ಗದ ಮೂಲಕ ಆಗಮಿಸಿ, ಬೆಳಗ್ಗೆ 10.45 ಗಂಟೆಗೆ ಶಿವಮೊಗ್ಗ ತಲುಪಲಿದ್ದಾರೆ. 11 ಗಂಟೆಗೆ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯ ಕಾರ್ಯಾರಂಭಕ್ಕೆ ವಚ್ರ್ಯುವಲ್ ಮೂಲಕ ಚಾಲನೆ ನೀಡುವರು. ಮಧ್ಯಾಹ್ನ 12.30 ಗಂಟೆಗೆ ಶಿವಮೊಗ್ಗ ಭದ್ರಾವತಿ ಪ್ರದೇಶದಲ್ಲಿ ರೈಲ್ವೆ ಲೆವಲ್ ಕ್ರಾಸಿಂಗ್ ಗೇಟ್ ನಂ.34, 49 ಮತ್ತು 52ರ ಬದಲಿಗೆ ರಸ್ತೆಯ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಸಚಿವರು (ವಚ್ರ್ಯುವಲ್) ಭಾಗವಹಿಸಲಿದ್ದಾರೆ.
16ರಂದು ಶಿವಮೊಗ್ಗದಲ್ಲಿ ವಾಸ್ತವ್ಯ ಇರಲಿದೆ. 17ರಂದು ಬೆಳಗ್ಗೆ 10.30 ಗಂಟೆಗೆ ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ರಜತ ಮಹೋತ್ಸವ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸುವರು. 11.30 ಗಂಟೆಗೆ ಬಿಜೆಪಿ ಕಾರ್ಯಕಾರಿಣಿ ಸಭೆ, ಮಧ್ಯಾಹ್ನ 12 ಗಂಟೆಗೆ ಈಡಿಗರ ಭವನ ಉದ್ಘಾಟನೆ, 1 ಗಂಟೆಗೆ ಸುವರ್ಣ ಸಾಂಸ್ಕøತಿಕ ಭವನದಲ್ಲಿ ಸಹ್ಯಾದ್ರಿ ನೋನಿ ಚಹದ ತಂತ್ರಜ್ಞಾನ ವರ್ಗಾವಣೆ ಕಾರ್ಯಕ್ರಮ, ಮಧ್ಯಾಹ್ನ 2 ಗಂಟೆಗೆ ಹೊಳಲೂರಿನಲ್ಲಿ ಕೆ.ಆರ್.ಡಿ.ಸಿ.ಎಲ್. ಆಯೋಜಿಸಿರುವ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ ಸನ್ಯಾಸಿ ಕೋಡುಮಗ್ಗೆ ಮತ್ತು ಹೊಳಲೂರು ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿ ಉದ್ಘಾಟನೆ, ಮಧ್ಯಾಹನ್ 3ಗಂಟೆಗೆ ಆನವೇರಿಯಲ್ಲಿ ಮಾರಮ್ಮ ದೇವಸ್ಥಾನ ಉದ್ಘಾಟನೆ, ಗುಡುಮಗಟ್ಟ ಗ್ರಾಮದಲ್ಲಿ ಶ್ರೀ ಈಶ್ವರ ಸ್ವಾಮಿ ನೂತನ ದೇವಸ್ಥಾನ ಗೃಹಪ್ರವೇಶ, ಭೈರವೇಶ್ವರ ಸ್ವಾಮಿ ದೇವಸ್ಥಾನ ಗೃಹ ಪ್ರವೇಶ, ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ, ರಾಜಗೋಪುರ ಕಳಸಾರೋಹಣ ನೂತನ ರಥ ಲೋಕಾರ್ಪಣೆ, ಶ್ರೀ ರಂಗನಾಥಸ್ವಾಮಿ ದ್ವಾರ ಬಾಗಿಲು ಲೋಕಾರ್ಪಣೆ ಮಾಡಲಿದ್ದಾರೆ.
ಸಂಜೆ 4 ಗಂಟೆಗೆ ಗುಡುಮಗಟ್ಟ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ.