ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಾಸಕ ಬಸನಗೌಡ ಪಾಟೀಲ್ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ನಡುವಿನ ವಾಕ್ಸಮರ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ.
ನಗರದ ಸ್ವತಂತ್ರ ಉದ್ಯಾನ ಕಾಮಗಾರಿ ವೀಕ್ಷಣೆ ವೇಳೆ ಮಂಗಳವಾರ ಮಾಧ್ಯಮದವರೊಂದಿಗೆ ವಿಜಯೇಂದ್ರ ಮಾತನಾಡಿದ್ದು, `ಹಾವು, ಚೇಳು ಯಡಿಯೂರಪ್ಪ ಅವರ ಕುಟುಂಬದಲ್ಲಿಯೇ ಇವೆ’ ಎಂಬ ಯತ್ನಾಳ್ ಹೇಳಿಕೆಗೆ ಡಿಬಿಜಿ ಅವರ ಕಗ್ಗದಿಂದ ಉತ್ತಿಸಿದರು.
`ಕಾಯಲು ಮೇಲೊಬ್ಬನಿರುವಾಗ ಕಾಯಕವಿಲ್ಲದವನ ಕೊಂಕು ಮಾತಿಗೆ ಕೊರಗುವುದೇಕೆ’ ಎಂದು ವಿಜಯೇಂದ್ರ ಟಾಂಗ್ ನೀಡಿದರು.
ಎಚ್.ಡಿಕೆಗೆ ತಿರುಗೇಟು | ರಾಮ ಮಂದಿರ ನಿರ್ಮಾಣಕ್ಕೆ ಹಣ ನೀಡದ ಮನೆಗಳಿಗೆ ಗುರುತು ಹಾಕಲಾಗುತ್ತಿದೆ ಎಂದು ಇತ್ತೀಚೆಗೆ ಹೇಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತಿಗೆ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ, ಎರಡು ವರ್ಷಗಳಿಂದ ರಾಜ್ಯದ ಜನ ಕುಮಾರಸ್ವಾಮಿ ಅವರನ್ನು ಮರೆತಿದ್ದಾರೆ. ಹೀಗಾಗಿ, ಅವರು ಜನರ ಗಮನ ಸೆಳೆಯಲು ಇಂತಹ ಹೇಳಿಕೆ ನೀಡಿರಬಹುದು ಎಂದು ತಿರುಗೇಟು ನೀಡಿದರು.