ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಗರದ ಬಿ.ಎಚ್.ರಸ್ತೆಯಲ್ಲಿರುವ ಮೀನಾಕ್ಷಿ ಭವನದಲ್ಲಿ ಬೆಳಗ್ಗೆಯ ಉಪಹಾರ ಸೇವಿಸಿ ಸರಳತೆ ಮೆರೆದಿದ್ದಾರೆ.
ಸಾಮಾನ್ಯವಾಗಿ ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿದ್ದರೆ ಬೆಳಗ್ಗೆಯ ಉಪಹಾರ ಇಲ್ಲಿಯೇ ಸೇವಿಸುತ್ತಾರೆ. ಈ ಮೂಲಕ ಅವರು ಸರಳತೆಯನ್ನು ಪ್ರದರ್ಶಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿದ್ದರೂ ಅವರು ತಮ್ಮ ಸರಳತೆಯನ್ನು ಮಾತ್ರ ಬಿಟ್ಟಿಲ್ಲ ಎನ್ನುವುದಕ್ಕೆ ಇದು ಉದಾಹರಣೆಯಾಗಿದೆ.