ಸುದ್ದಿ ಕಣಜ.ಕಾಂ
ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿರುವ ಬಗ್ಗೆ ಪ್ರತಿಪಕ್ಷಗಳಿಂದ ವ್ಯಕ್ತವಾಗುತ್ತಿರುವ ವಿರೋಧ, ಇಲ್ಲಸಲ್ಲದ ಆರೋಪಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ । ಮೇಲ್ದರ್ಜೆಗೇರಲಿವೆ ರಾಜ್ಯದ ಐಟಿಐ ಕಾಲೇಜುಗಳು, ಸಿಎಂ ಯಡಿಯೂರಪ್ಪ ಘೋಷಣೆ
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಆಯೋಜಿಸಿದ್ದ ಮಾಚೇನಹಳ್ಳಿ ಕೈಗಾರಿಕ ಸಂಘದ ರಜತ ಮಹೋತ್ಸವ ಕಟ್ಟಡದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಭವ್ಯ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಲಾಗುತ್ತಿದೆ. ಅದಕ್ಕೆ ಹಿಂದೂ, ಮುಸ್ಲಿಂ ಸೇರಿದಂತೆ ವಿವಿಧ ಧರ್ಮದವರು ಬೆಂಬಲಿಸಿ, ಹಣ ನೀಡುತ್ತಿದ್ದಾರೆ. ಹೀಗಿರುವಾಗ, ಪ್ರತಿಪಕ್ಷಗಳು ಮಾಡುತ್ತಿರುವ ಆರೋಪ ಅವರಿಗೆ ಘನತೆ ತರುವಂತಹದ್ದಲ್ಲ ಎಂದು ಹೇಳಿದರು.
ಬೇಕಿದ್ದರೆ ಹಣ ನೀಡಿ ಇಲ್ಲದಿದ್ದರೆ ಬಿಡಿ | ಹಣ ನೀಡುವಂತೆ ಯಾರಿಗೂ ಬಲವಂತ ಮಾಡುತ್ತಿಲ್ಲ. ಸ್ವ ಪ್ರೇರಣೆಯಿಂದಲೇ ಹಣ ನೀಡುತ್ತಿದ್ದಾರೆ. ಪ್ರತಿಪಕ್ಷದವರಿಗೆ ಹಣ ನೀಡಲು ಇಷ್ಟವಿಲ್ಲದಿದ್ದರೆ ಯಾವುದೇ ಒತ್ತಾಯವಿಲ್ಲ. ಬೇಕಿದ್ದರೆ ಕೊಡಲಿ, ಇಲ್ಲದಿದ್ದರೆ ಬಿಡಲಿ. ಆದರೆ, ಕೊಡುವವರಿಗೂ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಅಡ್ಡಿಪಡಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುಪ್ರೀಂ ತೀರ್ಪನ್ನೇ ವಿರೋಧಿಸಿದಂತೆ | ರಾಮ ಮಂದಿರ ನಿರ್ಮಾಣವನ್ನು ವಿರೋಧಿಸುವವರು ಸುಪ್ರೀಂ ಕೋರ್ಟ್ ತೀರ್ಪನ್ನೇ ವಿರೋಧಿಸಿದಂತೆ. ಇದನ್ನು ಆರೋಪಿಸುವವರು ಅರಿತುಕೊಳ್ಳಲಿ ಎಂದು ಹೇಳಿದರು.