ಸುದ್ದಿ ಕಣಜ.ಕಾಂ
ಶಿರಾಳಕೊಪ್ಪ: ಶಿಕಾರಿಪುರ-ಶಿರಾಳಕೊಪ್ಪ ಹೆದ್ದಾರಿಯಲ್ಲಿ ಮಂಗಳವಾರ ತಡ ರಾತ್ರಿ ಪೆಟ್ರೋಲ್ ತುಂಬಿದ ಟ್ಯಾಂಕರ್ ವೊಂದು ಭತ್ತದ ಗದ್ದೆಗೆ ಪಲ್ಟಿಯಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಇದನ್ನೂ ಓದಿ ।
ಚಾಲಕನ ಆಯತಪ್ಪಿದ್ದರಿಂದ ಟ್ಯಾಂಕರ್ ಆಯತಪ್ಪಿ ಗದ್ದೆಗೆ ನುಗ್ಗಿದೆ. ಟ್ಯಾಂಕರ್ ನಿಂದ ಪೆಟ್ರೋಲ್ ಕೂಡ ಸೋರಿಕೆಯಾಗಿದೆ.
ತಡಸ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ಘಟನೆ ಸಂಭವಿಸಿದ್ದರಿಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ರಾತ್ರಿ 2 ಗಂಟೆಯವರೆಗೆ ಕಾರ್ಯಾಚರಣೆ ನಡೆಸಲಾಯಿತು.
ಗದ್ದೆಯಲ್ಲಿ ಪೆಟ್ರೋಲ್ | ಭತ್ತದ ಗದ್ದೆಯಲ್ಲಿ ಪೆಟ್ರೋಲ್ ಸೋರಿಕೆಯಾಗಿತ್ತು. ಶಿಕಾರಿಪುರ, ಸೊರಬ ಅಗ್ನಿಶಾಮಕ ದಳ ಸಿಬ್ಬಂದಿ, ಎರಡು ಕ್ರೇನ್ ಕಾರ್ಯಾಚರಣೆ ನಡೆಸಿ ವಾಹನವನ್ನು ತೆರವುಗೊಳಿಸಿದರು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.