ಸುದ್ದಿ ಕಣಜ.ಕಾಂ
ಬೆಂಗಳೂರು: ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿರುವ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ್ ಅವರು ಕೂಡಲೇ ಆ ಪದವನ್ನು ಚಿತ್ರದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂಬಂಧ ಚಿತ್ರದ ನಿರ್ದೇಶಕ ನಂದಕಿಶೋರ್ ಅವರಿಗೆ ಮನವಿ ಕೂಡ ಮಾಡಲಾಗಿದೆ. ಒಂದುವೇಳೆ, ತಪ್ಪು ತಿದ್ದಿಕೊಳ್ಳದಿದ್ದರೆ ಫೆಬ್ರವರಿ 24ರಂದು ಪ್ರತಿಭಟನೆ ಮಾಡಲಾಗುವುದು. 23ರಂದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಲಾಗುವುದು ಎಂದು ಎಂದು ತಿಳಿಸಿದ್ದಾರೆ.