ತವರು ಕ್ಷೇತ್ರದಲ್ಲಿ ಹೇಗಿತ್ತು ಸಿಎಂ ಯಡಿಯೂರಪ್ಪ ಜನ್ಮದಿನ ಸಂಭ್ರಮ, ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಕೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನ ಪ್ರಯುಕ್ತ ನಗರದ ವಿವಿಧೆಡೆ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರ ನೇತೃತ್ವದಲ್ಲಿ ರವೀಂದ್ರ ನಗರ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಸಂಸದ ಬಿ.ವೈ.ರಾಘವೇಂದ್ರ ಮತ್ತು ಯಡಿಯೂರಪ್ಪ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಜಿಲ್ಲಾ ವಕ್ಫ್ ಮಂಡಳಿಯಿಂದ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

error: Content is protected !!