ಸುದ್ದಿ ಕಣಜ.ಕಾಂ
ಭದ್ರಾವತಿ: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅಡಕೆ ಬೆಳೆಗಾರರಿಗೆ ಅಭಯ ನೀಡಿದ್ದಾರೆ.
ಅಡಕೆ ಬೆಳೆಗಾರರು ಯಾವುದಕ್ಕೂ ಭಯ ಪಡಬೇಕಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಅವರೊಂದಿಗೆ ಇದೆ ಎಂದು ಹೇಳಿದ್ದಾರೆ.
ಅಡಕೆಗೆ ಉತ್ತಮ ಬೆಲೆ ಕೊಡಿಸುವುದು ಮಾತ್ರವಲ್ಲದೇ, ಅಡಕೆಯಿಂದ ಕಾಯಿಲೆ ಬರುತ್ತದೆ, ವಿಷಕಾರಕವೆಂದೆಲ್ಲ ಹೇಳಲಾಗುತ್ತಿದೆ. ಇಂತಹವುಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.