ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹುಣಸೋಡು ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೆ ಜಿಲ್ಲೆಯಲ್ಲಿ ಅಕ್ರಮ ಕಲ್ಲು ಕ್ವಾರಿಗಳು ಮತ್ತೆ ಜೀವ ಪಡೆಯುತ್ತಿವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಆರೋಪಿಸಿದರು.
ಘಟನೆ ನಡೆದು ಹಲವು ದಿನಗಳಾದರೂ ಯಾವುದೇ ಅಧಿಕಾರಿಯನ್ನು ಅಮಾನತುಗೊಳಿಸಿಲ್ಲ. ಪೊಲೀಸ್ ಇಲಾಖೆ ಕಣ್ಣುಮುಚ್ಚಿ ಕುಳಿತಿದೆ ಎಂದು ಮಾಧ್ಯಮಗೋಷ್ಠಿಯಲ್ಲಿ ಆಪಾದಿಸಿದರು.
ನಿರಾಶಾದಾಯಕ ಕೇಂದ್ರ ಬಜೆಟ್ | ಕೇಂದ್ರ ಸರ್ಕಾರ ಮಂಡನೆ ಮಾಡಿರುವ ಬಜೆಟ್ ನಿರಾಶದಾಯಕವಾಗಿದೆ. ಇದು ಜನ, ರೈತ, ಕಾರ್ಮಿಕ ವಿರೋಧಿ ಹಾಗೂ ಕಳಪೆ ಬಜೆಟ್ ಆಗಿದೆ ಎಂದು ಟೀಕಿಸಿದರು.
ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ಏಳು ಬಾರಿ ಬಜೆಟ್ ಮಂಡಿಸಿದಾರೆ. ಹಿಂದಿನ ಬಜೆಟ್ ಘೋಷಣೆಗಳು ಕಾಗದಕ್ಕೆ ಸೀಮಿತವಾಗಿವೆಯೇ ವಿನಹ ಅನುಷ್ಠಾನಗೊಂಡಿಲ್ಲ ಎಂದು ಆರೋಪಿಸಿದರು.
ಶಿವಮೊಗ್ಗದಲ್ಲಿ ಒಂದೂ ಶೌಚಾಲಯ ಕಟ್ಟಿಲ್ಲ | ಸ್ವಚ್ಛ ಭಾರತದ ಘೋಷಣೆಗಳನ್ನು ಮಾಡುತ್ತ ಬಂದಿರುವ ಬಿಜೆಪಿ ಸರ್ಕಾರ ಶಿವಮೊಗ್ಗ ನಗರದಲ್ಲಿ ಒಂದೇ ಒಂದು ಶೌಚಾಲಯ ಕಟ್ಟಲಿಲ್ಲ. ರೈತರಿಗೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಎಚ್.ನಾಗರಾಜ್, ವಕ್ತಾರರಾದ ಪಲ್ಲವಿ, ಚಂದ್ರಭೂಪಾಲ್, ರಾಮೇಗೌಡ, ಚಂದನ್, ನಾಗರಾಜ್, ಶಬ್ಬೀರ್ ಅಹಮ್ಮದ್ ಉಪಸ್ಥಿತರಿದ್ದರು.