ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳು ವೈಜ್ಞಾನಿಕವಾಗಿ ಮಾಡುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಭಾರಿ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ಮಾಡಲಾಯಿತು.
ನಗರದ ಲಕ್ಷ್ಮೀ ಟಾಕೀಸ್ ಬಳಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಳಪೆ ಕಾಮಗಾರಿ ಮಾಡುತ್ತಿರುವುದಾಗಿ ಆರೋಪಿಸಲಾಯಿತು.
ಸ್ಮಾರ್ಟ್ ಸಿಟಿ ಯೋಜನೆ ಬೇಕಾಬಿಟ್ಟಿ ಮಾಡುತ್ತಿದ್ದು, ಉತ್ತಮ ಸ್ಥಿತಿಯಲ್ಲಿರುವ ರಸ್ತೆ ಮತ್ತು ಚರಂಡಿಗಳನ್ನು ಅಗೆದು ಹಾಳು ಮಾಡಲಾಗುತ್ತಿದೆ. ಏಕ ಕಾಲಕ್ಕೆ ಶಿವಮೊಗ್ಗದ ಎಲ್ಲ ರಸ್ತೆಗಳನ್ನು ಅಗೆದಿದ್ದು, ಜನ ಸಂಚಾರಕ್ಕೆ ಭಾರಿ ತೊಂದರೆ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಮುಖರಾದ ಚಂದ್ರಭೂಪಾಲ್, ಪಲ್ಲವಿ, ವೈ.ಎಚ್.ನಾಗರಾಜ್, ರಾಮೇಗೌಡ, ಸೌಗಂದಿಕ, ಎಚ್.ಪಿ.ಗಿರೀಶ್, ಯಮುನಾ ರಂಗೇಗೌಡ, ಎಚ್.ಎಂ.ಚಂದ್ರಶೇಖರಪ್ಪ, ರೇಖಾ ರಂಗನಾಥ್, ಚಂದನ್, ರಂಗನಾಥ್, ನೇತಾಜಿ ಇಕ್ಬಾಲ್, ಶಮೀನಾಭಾನು, ಅರ್ಚನ, ಸಂಧ್ಯಾರಾಣಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.