ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆರಾಧ್ಯ ದೈವ ಶ್ರೀರಾಮನಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶುಕ್ರವಾರ ಚಿನ್ನದ ಪಾದುಕೆಗಳನ್ನು ಅರ್ಪಿಸಿದರು.
ಸಚಿವರು ಪಾದುಕೆಗಳನ್ನು ತಮ್ಮ ತಲೆಯ ಮೇಲೆ ಹೊತ್ತುಕೊಂಡು ದೇವಸ್ಥಾನದೊಳಗೆ ಪ್ರವೇಶಿಸಿದರು. ತಮ್ಮ ಪತ್ನಿ, ಮಕ್ಕಳು, ಮೊಮ್ಮಕ್ಕಳೊಂದಿಗೆ ದೇವಸ್ಥಾನಕ್ಕೆ ಹೋಗಿದ್ದ ಸಚಿವರು ಪಾದುಕೆಗಳನ್ನು ಅರ್ಪಿಸಿ ವಿಶೇಷ ಪೂಜೆ ಮಾಡಿದರು.
ಕಂಪ್ಲೀಟ್ ವಿಡಿಯೋ ರಿಪೋರ್ಟ್ ಇಲ್ಲಿದೆ | ಕ್ಲಿಕ್ ಮಾಡಿ