ಸುದ್ದಿ ಕಣಜ.ಕಾಂ
ಶಿರಾಳಕೊಪ್ಪ: ಪಟ್ಟಣದ ಚಿಕ್ಕಮಾಗಡಿ ತಾಂಡದಲ್ಲಿ ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದೆ. ದಿಢೀರ್ ದಾಳಿ ನಡೆಸಿದ್ದು, 315 ಲೀಟರ್ ಬೆಲ್ಲದ ಕೊಳೆ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ । ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗಕ್ಕೆ ಕೂಡಿಬಂತು ಮುಹೂರ್ತ
ಜವಳಕಟ್ಟೆ ಕೆರೆ ಮತ್ತು ಕೆರೆಕಟ್ಟೆ ಕೆರೆಯ ದಡದಲ್ಲಿದ್ದ ಕಳ್ಳಬಟ್ಟಿ ಸಾರಾಯಿ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಕಳ್ಳಭಟ್ಟಿ ತಯಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ನಾಶಪಡಿಸಿದ್ದಾರೆ.
ಆರೋಪಿಗಳು ಪರಾರಿ | ಕಳ್ಳಭಟ್ಟಿ ತಯಾರಿಸುತ್ತಿದ್ದ ಆರೋಪಿಗಳು ಅಬಕಾರಿ ಇಲಾಖೆ ಅಧಿಕಾರಿಗಳನ್ನು ಕಂಡು ಪರಾರಿಯಾಗಿದ್ದಾರೆ.
ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ನೇತೃತ್ವದ ತಂಡದಲ್ಲಿ ಅಬಕಾರಿ ನಿರೀಕ್ಷಕ ಡಿ.ಎನ್. ಹನುಮಂತಪ್ಪ ಮತ್ತಿತರ ಅಧಿಕಾರಿ, ಸಿಬ್ಬಂದಿ ಇದ್ದರು.