ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಧುಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ನಮ್ಮ ಸ್ವಾಗತವಿದೆ. ಆದರೆ, ಆರ್.ಎಂ.ಮಂಜುನಾಥ್ ಗೌಡ ಅವರು ಸೇರ್ಪಡೆಗೆ ನಾನು ವೈಯಕ್ತಿಕವಾಗಿ ವಿರೋಧಿಸುತ್ತೇನೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಮಧು ಬಂಗಾರಪ್ಪ ಅವರನ್ನು ಕಾಂಗ್ರೆಸ್ ಸೇರುವಂತೆ ನಾನೇ ಸಲಹೆ ನೀಡಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ । ಚಿಕ್ಕಬಳ್ಳಾಪುರ ಘಟನೆ ಬೆನ್ನಲ್ಲೇ ಮತ್ತೆ ಕೇಳಿಬಂತು ಸಿಬಿಐ ತನಿಖೆಯ ಕೂಗು
ರಾಜೀನಾಮೆ ನೀಡಲಿ | ಸಚಿವರು ತಮ್ಮ ಜಾತಿಗಳ ಪರವಾಗಿ ಹೋರಾಟ ಮಾಡುವುದಾದರೆ ಹಿಂದುತ್ವ ಹಾಗೂ ಜಾತ್ಯಾತೀತತೆಗೆ ಏನರ್ಥ? ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯವರು ತಮ್ಮ ಪಕ್ಷ ಹಾಗೂ ಸರ್ಕಾರದ ವಿರುದ್ಧ ಹೋರಾಡುವುದಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಹೇಳಿದರು.
ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರು ಬಿಜೆಪಿಯ ಸಚಿವರು, ಶಾಸಕರು ಯಾವ ಕಾರಣಕ್ಕಾಗಿ ಅದನ್ನು ಮಾಡುತ್ತಿದ್ದಾರೆ ಅರ್ಥವಾಗಿಲ್ಲ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡರಾದ ವೇದಾ ವಿಜಯ ಕುಮಾರ್, ಯೋಗೇಶ್, ರಮೇಶ್ ಹೆಗ್ಡೆ ಉಪಸ್ಥಿತರಿದ್ದರು.