ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ಬೈಕ್ ನಿಂದ ಲಾಂಗು ತೆಗೆದು ಸಾರ್ವಜನಿಕರಲ್ಲಿ ಮೂಡಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರ್.ಎಂ.ಎಲ್ ನಗರದ ಸಮೀವುಲ್ಲಾ ಬಂಧಿತ ಆರೋಪಿ. ಬೈಕ್ ನಲ್ಲಿ ಮಾರಕಾಸ್ತ್ರಗಳನ್ನು ತಂದಿದ್ದ ಈತ ಹೊರತೆಗೆದು ಒಳಗಿಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ಆರೋಪಿಯಿಂದ 50 ಸಾವಿರ ರೂಪಾಯಿ, ಲಾಂಗು, ಬೈಕ್ ವಶಕ್ಕೆ ಪಡೆದಿದ್ದಾರೆ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.