ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಧಿ ಬಜಾರಿನಲ್ಲಿ ಸಾರ್ವಜನಿಕವಾಗಿ ಮಟ್ಕಾ ಜೂಜಾಟ ಬರೆಯುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ.
ಪ್ರವೀಣ್ ಕುಮಾರ್ (28) ಬಂಧಿತ ಆರೋಪಿ. ಈತನಿಂದ 27,860 ರೂ. ವಶಕ್ಕೆ ಪಡೆಯಲಾಗಿದೆ.
ಖಚಿತ ಬಾತ್ಮಿ ಮೇರೆಗೆ ಜಿಲ್ಲಾ ಪೆÇಲೀಸ್ ಕಚೇರಿಯ ಡಿ.ಎಸ್.ಬಿ ವಿಭಾಗದ ಪೊಲೀಸ್ ನಿರೀಕ್ಷಕ ಕುಮಾರಸ್ವಾಮಿ ಹಾಗೂ ಸಿಬ್ಬಂದಿ ಹಾಲಪ್ಪ, ಸತೀಶ್ ರಾಜ್, ಮಂಜುನಾಥ್, ಚಂದ್ರಾನಾಯ್ಕ್, ಸಮೀವುಲ್ಲಾ ಮತ್ತು ವಸಂತ ಅವರು ಕಾರ್ಯಾಚರಣೆ ನಡೆಸಿದ್ದಾರೆ.