ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಮ ಮಂದಿರ ನಿರ್ಮಾಣಕ್ಕೆ ಹಲವು ಪ್ರಮುಖರು, ಗಣ್ಯರು, ಜನಪ್ರತಿನಿಧಿಗಳೂ ದೇಣಿಗೆ ನೀಡುತ್ತಿದ್ದಾರೆ. ಅದಕ್ಕಾಗಿ ಮನೆಗಳಿಗೆ ಭೇಟಿ ಹಣ ಸಂಗ್ರಹ ಕೂಡ ಮಾಡಲಾಗುತ್ತಿದೆ.
ಆದರೆ, ಶಿವಮೊಗ್ಗ ಬೊಮ್ಮನಕಟ್ಟೆ ನಿವಾಸಿ ಶಂಕರ್ ಮತ್ತು ನೇತ್ರಾವತಿ ದಂಪತಿಯ ಮಕ್ಕಳಾದ ಅನುಶ್ರೀ ಮತ್ತು ಛಾಯಾಶ್ರೀ ಅವರು ಪೋಷಕರು ಕೊಟ್ಟ ಹಣವನ್ನು ಕೂಡಿಟ್ಟು ಅದನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ರೂಪದಲ್ಲಿ ಕೊಟ್ಟಿದ್ದಾರೆ. ಇದಕ್ಕೆ ಭಾರಿ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.
ಕೆ.ಎಸ್.ಈಶ್ವರಪ್ಪ ಅವರಿಗೆ ದೇಣಿಗೆ ಹಸ್ತಾಂತರ | ಅನುಶ್ರೀ, ಛಾಯಾಶ್ರೀ ಅವರ ತಂದೆ ಪೇಂಟರ್ ಆಗಿ ಕೆಲಸ ಮಾಡುತ್ತಾರೆ. ಹಲವು ವರ್ಷಗಳಿಂದ ನೀಡುತ್ತಾ ಬಂದಿರುವ ಹಣವನ್ನು ಕೂಡಿಟ್ಟು ಅದನ್ನು ಈಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ.
ದೇಶಾದ್ಯಂತ ಜನರು ದೇಣಿಗೆ ನೀಡುತ್ತಿದ್ದಾರೆ. ಆದರೆ, ವಿದ್ಯಾರ್ಥಿಗಳು ತಮ್ಮ ಖರ್ಚಿಗೆಂದು ನೀಡಿದ್ದ ಹಣ ನೀಡಿದ್ದಕ್ಕೆ ಪುಳಕಿತನಾಗಿದ್ದೇನೆ.
ಇಬ್ಬರು ವಿದ್ಯಾರ್ಥಿನಿಯರು ನೀಡಿದ ಹಣ ನಮಗೆ ಇನ್ನೂ ಹೆಚ್ಚಿನ ಪ್ರೇರಣೆ ನೀಡುತ್ತದೆ. ಪ್ರಧಾನಿ ಮೋದಿಯವರ ಕರೆ ಕೂಡ ಸಾರ್ಥಕವಾಗಿದೆ ಎಂದು ಹೇಳಿದರು.
ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ, ಸ್ಥಳೀಯ ಮುಖಂಡ ಪುರುಷೋತ್ತಮ್ ಉಪಸ್ಥಿತರಿದ್ದರು.