ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಯ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧರ್ಮ ಮತ್ತು ದೇಶದ ವಿರುದ್ಧ ಹೇಳಿಕೆ ನೀಡುವವರನ್ನು ಜನ ಕ್ಷಮಿಸುವುದಿಲ್ಲ. ರಾಮ ಮಂದಿರದ ಬಗ್ಗೆ ಅನಗತ್ಯ ಹೇಳಿಕೆ ನೀಡುತ್ತಿರುವವರು ಕೂಡಲೇ ಬಹಿರಂಗ ಕ್ಷಮೆ ಯಾಚಿಸಲಿ.
– ಕೆ.ಎಸ್.ಈಶ್ವರಪ್ಪ, ಸಚಿವ
‘ಮಸೀದಿ ಕೆಡವಿದ ಜಾಗದಲ್ಲಿ ರಾಮ ಮಂದಿರ ನಿರ್ಮಿಸದೆ ಬೇರೆಡೆ ನಿರ್ಮಿಸಿದರೆ ದೇಣಿಗೆ ನೀಡುವುದಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದರೆ, ದೇಣಿಗೆ ನೀಡದವರ ಮನೆಗಳನ್ನು ಮಾರ್ಕ್ ಮಾಡುತ್ತಿರುವ ಬಗ್ಗೆ ಕುಮಾರಸ್ವಾಮಿ ಹೇಳಿದ್ದಾರೆ. ಇವರಿಬ್ಬರೂ ಕೋತಿಗಳಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.
ನಿಧಿ ಸಂಗ್ರಹದ ಬಗ್ಗೆ ಲೆಕ್ಕ ಕೇಳಲು ನೀವ್ಯಾರು | ಸಿದ್ದರಾಮಯ್ಯ ಅವರು ನಿಧಿ ಸಂಗ್ರಹದ ಲೆಕ್ಕ ಕೇಳುತ್ತಿದ್ದಾರೆ. ಅದನ್ನು ಕೇಳಲು ಸಿದ್ದರಾಮಯ್ಯ ಯಾರು? ಒಂದುವೇಳೆ, ಈ ಮಾಹಿತಿಯನ್ನು ರಾಮ ಭಕ್ತರು ಕೇಳಿದ್ದಲ್ಲಿ ಮಾಹಿತಿ ನೀಡಲಾಗುವುದು ಎಂದು ಹೇಳಿದರು.