ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಾರ್ವಜನಿಕರು ಎದುರಿಸುತ್ತಿರುವ ಇಂಟರ್ನೆಟ್ ಮತ್ತು ಮೊಬೈಲ್ ನೆಟ್ ವರ್ಕ್ ಸಮಸ್ಯೆಗಳಿಗೆ ಪರಿಹರ ಕಂಡುಕೊಳ್ಳುವ ನಿಟ್ಟಿನಲ್ಲಿ
ರಾಜ್ಯಮಟ್ಟದಲ್ಲಿ ಬ್ರಾಂಡ್ ಬ್ಯಾಂಡ್ ಸಮಿತಿಯನ್ನು ರಚಿಸಲಾಗಿದೆ.
ಜತೆಗೆ, ರಾಜ್ಯ ಮತ್ತು ಜಿಲ್ಲಾಮಟ್ಟದ ದೂರ ಸಂಪರ್ಕ ಸಮನ್ವಯ ಸಮಿತಿಗಳನ್ನು ರಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ, ವಿದ್ಯುನ್ಮಾನ, ಮಾಹಿ ತಿ ತಂತ್ರಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಇದನ್ನೂ ಓದಿ । ರಾಮ ಮಂದಿರ ನಿರ್ಮಾಣಕ್ಕೆ ಕೂಡಿಟ್ಟ ಹಣವನ್ನೇ ನೀಡಿದ ವಿದ್ಯಾರ್ಥಿಗಳು!
`ಸಾಗರ ಮತ್ತು ಹೊಸನಗರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ ಹಾಗೂ ಇದರಿಂದ ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣಕ್ಕೆ ತೊಡಕಾಗಿದೆ. ಜತೆಗೆ, ಸರ್ಕಾರಿ ಸೌಲಭ್ಯಗಳಿಗೆ ಜಿಪಿಎಸ್ ಮಾಡಲು ತೊಂದರೆ ಆಗುತ್ತಿದೆ’ ಎಂದು ಹಾಲಪ್ಪ ಅವರು ಪ್ರಶ್ನಿಸಿದ್ದರು.
2 ಗೋಪುರ ಸ್ಥಾಪನೆ ಬಾಕಿ | `ಸಾಗರ ಮತ್ತು ಹೊಸನಗರ ತಾಲೂಕುಗಳಲ್ಲಿ 60 ದೂರ ಸಂಪರ್ಕ ಗೋಪುರಗಳು ಸುಸ್ಥಿತಿಯಲ್ಲಿವೆ. ಉಳಿದ ಎರಡು ದೂರ ಸಂಪರ್ಕ ಗೋಪುರ ಸ್ಥಾಪನೆ ಬಾಕಿ ಇದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಅವರು ಮಾಹಿತಿ ನೀಡಿದ್ದಾರೆ’ ಎಂದು ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಇದನ್ನೂ ಓದಿ । 4 ದಿನ ಶಿವಮೊಗ್ಗದಲ್ಲಿ ಇರಲಿದ್ದಾರೆ ಸಿ.ಎಂ ಬಿ.ಎಸ್.ಯಡಿಯೂರಪ್ಪ
ನೆಟ್ವರ್ಕ್ ಬಲವರ್ಧನೆ | `ಶಿವಮೊಗ್ಗ ಜಿಲ್ಲೆಯ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಬಗ್ಗೆ 2020ರ ಸೆಪ್ಟೆಂಬರ್ 17ರಂದು ಕೇಂದ್ರ ಸರ್ಕಾರದ ಸಂವಹನ ಮಂತ್ರಾಲಯದ ಸಚಿವರಿಗೆ ಪತ್ರ ಕೂಡ ಬರೆದಿದ್ದೇನೆ. ಅವರು 2020ರ ಡಿಸೆಂಬರ್ 17ರಂದು ಪತ್ರ ಬರೆದಿದ್ದು, ನೆಟ್ವರ್ಕ್ ಬಲವರ್ಧನೆಗೆ ಕ್ರಮವಹಿಸುವುದಾಗಿ ತಿಳಿಸಿದ್ದಾರೆ’ ಎಂದು ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದಾರೆ.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ದೂರ ದೂರ ಸಂಪರ್ಕ ಗೋಪುರಗಳನ್ನು ಅಳವಡಿಸಲು ಅನುಸರಿಸಬೇಕಾದ ಕೇಂದ್ರ ಸರ್ಕಾರದ ಮಾರ್ಗಸೂಚಿಗೆ ಅನುಗುಣವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ನಗರಾಭಿವೃದ್ಧಿ ಇಲಾಖೆಗಳಿಂದ ನಿಯಮಗಳನ್ನು ಪರಿಷ್ಕರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.