ಸುದ್ದಿ ಕಣಜ.ಕಾಂ
ಭದ್ರಾವತಿ: ಇತ್ತೀಚೆಗೆ ಭದ್ರಾವತಿಯ ಕನಕ ಮಂಟಪದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಸಂಭವಿಸಿದ ಘರ್ಷಣೆ ಹಿನ್ನೆಲೆ ಮಾರ್ಚ್ 2 ಬೆಳಗ್ಗೆ 11 ರಿಂದ ಮಾರ್ಚ್ 5ನೇ ತಾರೀಕು ಮಧ್ಯರಾತ್ರಿ 12 ವರೆಗೆ ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಹೇರಲಾಗಿದೆ.
ಗುಪ್ತಚರ ಮಾಹಿತಿ ಹಿನ್ನೆಲೆ 144 | ಭದ್ರಾವತಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿಷೇಧಾಜ್ಞೆ ಹೇರಲಾಗಿದೆ ಎಂದು ಭದ್ರಾವತಿ ತಹಸೀಲ್ದಾರ್ ಅವರು ಆದೇಶದಲ್ಲಿ ಹೇಳಿದ್ದಾರೆ.
ಬಿಜೆಪಿ ಮುಖಂಡರು ಮಾಡಿರುವ ಹಲ್ಲೆಯನ್ನು ಖಂಡಿಸಿ ಭದ್ರಾವತಿ ಕಾಂಗ್ರೆಸ್ ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆದರೆ, ಗುಪ್ತಚರ ಮಾಹಿತಿ ಪ್ರಕಾರ, ಆ ವೇಳೆ ಕಿಡಿಗೇಡಿಗಳು ಗಲಾಟೆ ಮಾಡುವ ಸಾಧ್ಯತೆ ಎಂಬ ವಿಚಾರ ಗೊತ್ತಾಗಿದೆ. ಹೀಗಾಗಿ, ನಿಷೇಧಾಜ್ಞೆ ಹೇರಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡುವಂತೆ ಕೋರಿದ್ದಾರೆ.