ಸುದ್ದಿ ಕಣಜ.ಕಾಂ
ಶಿವಮೊಗ್ಗ: ನೀರಾವರಿ ಸಚಿವ ರಮೇಶ್ ಜಾರಕಿಗೊಳಿ ಸೆಕ್ಸ್ ಸಿಡಿಯಲ್ಲಿ ದೃಶ್ಯಗಳು ವೈರಲ್ ಆಗಿದ್ದೇ ನಗರದ ಗೋಪಿ ವೃತ್ತದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮಂಗಳವಾರ ಪ್ರತಿಭಟನೆ ಮಾಡಲಾಯಿತು.
ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾ ಮಾಡಬೇಕು. ಸಚಿವ ಸಂಪುಟದಿಂದ ಅವರನ್ನು ಕೂಡಲೇ ಮುಖ್ಯಮಂತ್ರಿಗಳು ವಜಾಗೊಳಿಸಬೇಕು. ಇಲ್ಲವಾದ್ದಲ್ಲಿ ಮಾರ್ಚ್ 3ರಂದು ಮುಖ್ಯಮಂತ್ರಿಗಳ ಮನೆ ಮುತ್ತಿಗೆ ಹಾಕಲಾಗುವುದು ಎಂದು ಯುವ ಕಾಂಗ್ರೆಸ್ ಎಚ್ಚರಿಸಿದೆ.
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಯುವ ಕಾಂಗ್ರೆಸ್ ನಿಕಟ ಪೂರ್ವಾಧ್ಯಕ್ಷ ಎಂ.ಪ್ರವೀಣ್ ಕುಮಾರ್, ರಾಜ್ಯ ಕಾರ್ಯದರ್ಶಿ ಆರ್.ಕಿರಣ್ ಶಿವಮೊಗ್ಗ ನಗರ ಅಧ್ಯಕ್ಷ ಬಿ.ಲೋಕೇಶ್, ಪದಾಧಿಕಾರಿಗಳಾದ ಕುಮರೇಶ್, ಪುಷ್ಪಕ್ ಕುಮಾರ್, ಅರುಣ್, ನವುಲೆ ಜಮೀಲ್, ಮಹೇಂದ್ರ ಜೈನ್, ಪವನ್, ರಾಕೇಶ್, ಗಗನ್, ಪರಶುರಾಮ್ ಮಸ್ತಾನ್ ಭಾಗವಹಿಸಿದ್ದರು.