ಸುದ್ದಿ ಕಣಜ.ಕಾಂ
ಭದ್ರಾವತಿ: ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರನನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ | ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ, ಪೊಲೀಸ್ ಲಾಠಿ ಚಾರ್ಜ್, ಮುಂದೇನಾಯ್ತು?
ಇತ್ತೀಚೆಗೆ ಕಬಡ್ಡಿ ಪಂದ್ಯಾವಳಿಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಶಾಸಕರ ಪುತ್ರ ಬಸವೇಶ್ ಅವರನ್ನು ಚಿತ್ರದುರ್ಗದ ಚಳ್ಳಕೆರೆಯಲ್ಲಿ ಬಂಧಿಸಲಾಗಿದೆ.
ಸಂಗಮೇಶ್ವರ್ ಅವರು ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ತಮ್ಮ ಮೇಲೆ ಹಲ್ಲೆ ಮಾಡಿರುವುದಾಗಿ ಬಿಜೆಪಿ ಮುಖಂಡರು ದೂರು ದಾಖಲಿಸಿದ್ದರು. ಈ ಪ್ರಕರಣ ಸಂಬಂಧಪಟ್ಟಂತೆ ಬಂಧಿಸಲಾಗಿದೆ.