ಸುದ್ದಿ ಕಣಜ.ಕಾಂ
ಹೊನ್ನಾವರ/ಸಾಗರ: ತಾಲೂಕಿನ ಖರ್ವಾ ಮತ್ತು ಯಲ್ಲಾಪುರ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
ಸಾಗರದಿಂದ ಕುಮಟಾಕ್ಕೆ ಸಹಪಾಠಿಯ ಮಗಳ ಜನ್ಮ ದಿನಾಚರಣೆಯನ್ನು ಆಚರಿಸುವುದಕ್ಕಾಗಿ ಮಿನಿ ಬಸ್ ನಲ್ಲಿ 23 ಮಹಿಳೆಯರು ಪ್ರಯಾಣಿಸುತ್ತಿದ್ದರು. ಆಗ ವಾಹನದ ಟೈಯರ್ ಸಿಡಿದು ಬಸ್ ಪಲ್ಟಿಯಾಗಿದೆ.
ಅಪಘಾತದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಗಾಯಾಳುಗಳ ಕುಟುಂಬಸ್ಥರು ಹೊನ್ನಾವರಕ್ಕೆ ತೆರಳಿ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಇನ್ನುಳಿದ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.