ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಖಲಾದ ಪ್ರಕರಣ ಖಂಡಿಸಿ ಮಾರ್ಚ್ 13ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
ಈ ಪ್ರತಿಭಟನೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯಸಭೆ ವಿಪಕ್ಷ ನಾಯಕರೂ ಆದ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರು, ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ | ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು?, ಅಡಕೆ ಸಮಸ್ಯೆಗೆ ಪರಿಹಾರ, ಇನ್ನು ಸಾಕಷ್ಟು ಗಿಫ್ಟ್
ಶಾಸಕರ ವಿರುದ್ಧ ಕೇಸ್ ದಾಖಲು ಮಾಡಿರುವುದರ ವಿರುದ್ಧ ಸಿಡಿದೆದ್ದಿರುವ ಜಿಲ್ಲಾ ಕಾಂಗ್ರೆಸ್ ಮಾರ್ಚ್ 9ರಂದು ಪ್ರತಿಭಟನೆ ಮಾಡುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ಆದರೆ, ಖುದ್ದು ಸಿದ್ದರಾಮಯ್ಯ ಸೇರಿ ಇನ್ನಿತರ ಕಾಂಗ್ರೆಸ್ ವರಿಷ್ಠರು ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದರಿಂದ ಪ್ರತಿಭಟನೆಯನ್ನು ಮಾರ್ಚ್ 9ರ ಬದಲು 13ರಂದು ನಡೆಯಲು ನಿರ್ಧರಿಸಲಾಗಿದೆ.
ಇನ್ನೂ ಫಿಕ್ಸ್ ಆಗಿಲ್ಲ ಜಾಗ
ಕಾಂಗ್ರೆಸ್ ಪಕ್ಷದ ರಾಜ್ಯದ ವರಿಷ್ಠರು ಪ್ರತಿಭಟನೆಗೆ ಆಗಮಿಸುತ್ತಿರುವುದರಿಂದ ಸಹಜವಾಗಿಯೇ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಅದನ್ನು ನಿಯಂತ್ರಿಸಲು ಕಷ್ಟವಾಗಲಿದೆ. ಹೀಗಾಗಿ, ಯಾವ ಸ್ಥಳದಲ್ಲಿ ಪ್ರತಿಭಟನೆ ಮಾಡಬೇಕೆಂಬುವುದು ಇದುವರೆಗೆ ನಿರ್ಧರಿಸಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಅವರು ಸುದ್ದಿ ಕಣಜಕ್ಕೆ ತಿಳಿಸಿದ್ದಾರೆ.
ಪ್ರತಿಭಟನೆ ಕಾವೇರುವ ಸಾಧ್ಯತೆ
ಇದುವರೆಗೆ ಭದ್ರಾವತಿ ಪ್ರಕರಣವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಹಲವು ರೀತಿಯಲ್ಲಿ ಪ್ರತಿಭಟನೆ ನಡೆಸಿದೆ. ಕಿಮ್ಮನೆ ರತ್ನಾಕರ್ ಅವರೂ ಹಲವು ಪ್ರತಿಭಟನಾ ಸಭೆಗಳಲ್ಲಿ ಬಹಿರಂಗವಾಗಿ ಬಿಜೆಪಿಯನ್ನು ಟೀಕಿಸಿದ್ದಾರೆ. ಗಲಾಟೆ ಆಗಬಹುದು ಎಂಬ ಕಾರಣಕ್ಕೆ 144 ಕೂಡ ಜಾರಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಇವೆಲ್ಲವುಗಳ ಮಧ್ಯೆ ಸಿದ್ದರಾಮಯ್ಯ, ಖರ್ಗೆ, ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಲ್ಲಿ ಪ್ರಕರಣ ಇನ್ನಷ್ಟು ಕಾವು ಪಡೆಯಲಿದೆ.