ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಜೆ.ಎನ್.ಎನ್.ಸಿ. ಎಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಎಂಬಿಎ ವಿಭಾಗ ವಿದ್ಯಾರ್ಥಿಗಳು ವಿಶ್ವ ಮಹಿಳಾ ದಿನಾಚರಣೆಯನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
ವಿದ್ಯಾರ್ಥಿಗಳು ಮಹಿಳಾ ಸಾಧಕರ ಕಿರುಚಿತ್ರ ಪ್ರದರ್ಶಿಸಿದರು. ಮಹಿಳೆಯರಿಗೋಸ್ಕರ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಈ ವೇಳೆ ಮಾತನಾಡಿದ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸಿ.ಕೆ.ಅನುರಾಧ, ಆಧುನಿಕ ಯುಗದಲ್ಲಿ ಮಹಿಳೆಯರು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಅವರಿಗೆ ಸೂಕ್ತ ಅವಕಾಶ ನೀಡಿದಾಗ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯ. ಆಗ ಮಹಿಳಾ ದಿನಾಚರಣೆಗೂ ಒಂದು ನೈಜ ಅರ್ಥ ಬಂದಂತಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ | ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು?, ಅಡಕೆ ಸಮಸ್ಯೆಗೆ ಪರಿಹಾರ, ಇನ್ನು ಸಾಕಷ್ಟು ಗಿಫ್ಟ್
ಸಹಾಯಕ ಪ್ರಾಧ್ಯಾಪಕಿ ಡಾ. ಸುಭದ್ರ ಮಾತನಾಡಿ, ಸಮಾಜದಲ್ಲಿ ಅನಾದಿ ಕಾಲದಿಂದಲೂ ಮಹಿಳೆಯರನ್ನು ಗೌರವದಿಂದ ಕಾಣುವಂತಹ ವ್ಯವಸ್ಥೆ ಇದೆ. ಧಾರ್ಮಿಕವಾಗಿ ದೇವತೆಗಳನ್ನು ಪೂಜಿಸುವುದು ಮಹಿಳೆಯರಿಗೆ ಕೊಡುವ ಗೌರವ ಎಂದು ಅಭಿಪ್ರಾಯಪಟ್ಟರು.
ಎಂಬಿಎ ವಿಭಾಗದ ನಿರ್ದೇಶಕ ಡಾ.ಸಿ ಶ್ರೀಕಾಂತ್ ಎಲ್ಲರಿಗೂ ಮಹಿಳಾ ದಿನಾಚರಣೆ ಶುಭಾಷಯ ಕೋರಿದರು.