ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಬಳಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ.
ಸ್ಫೋಟಕ ತುಂಬಿದ ಎರಡು ವಾಹನಗಳು ಕಂಡುಬಂದಿದ್ದೇ ತಕ್ಷಣ ತುಂಗಾನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಂತರ, ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲಿಸಿದ್ದಾರೆ. ಯಾವುದೇ ಸಮಸ್ಯೆಗಳಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
ಪತ್ತೆಯಾದ ಸ್ಫೋಟಕವೆಷ್ಟು | ಟಾಟಾ ವಾಹನದಲ್ಲಿ 36 ಬಾಕ್ಸ್ ಜಿಲೆಟಿನ್ ಕಡ್ಡಿ, ಪಿಕ್ ಅಪ್ ವಾಹನದಲ್ಲಿ 3,267 ಎಲೆಕ್ಟ್ರಾನಿಕ್ ಡಿಟೋನೇಟರ್, 9 ಮೀಟರಿನ 79 ಎಕ್ಸಲ್ ಗಳು,3 ಮೀಟರ್ 105 ಎಕ್ಸೆಲ್ ಪತ್ತೆಯಾಗಿವೆ. ಒಟ್ಟು 904 ಕೆ.ಜಿ. ಜಿಲೆಟಿನ್ ಕಡ್ಡಿ, 3,267 ಡಿಟೋನೇಟರ್ ಇರುವುದು ದೃಢಪಟ್ಟಿದೆ.
ಇಷ್ಟೊಂದು ದೊಡ್ಡ ಪ್ರಮಾಣದ ಸ್ಫೋಟ ಹೇಗೆ ಬಂತು, ಕಾರಣವೇನು? | ವಿಮಾನ ನಿಲ್ದಾಣ ಕಾಮಗಾರಿ ಪರಗತಿಯಲ್ಲಿದ್ದು, ಕೆಲಸಕ್ಕೆಅ ಗತ್ಯವಿರುವ ಜಲ್ಲಿ ಉತ್ಪಾದನೆಗೆ ಅಲ್ಲಿಯೇ ಕ್ವಾರಿಗೆ ಪರವಾನಗಿ ನೀಡಲಾಗಿದೆ. ಇದಕ್ಕೆ ಅಗತ್ಯವಿರುವ ಸ್ಫೋಟಕ ಪೂರೈಕೆಗೆ ಚಿಕ್ಕಬಳ್ಳಾಪುರದ ಕಂಪೆನಿಯೊಂದರ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅವರು ವಾಹನಗಳನ್ನು ತಂದು ಅಲ್ಲಿಯೇ ಬಿಟ್ಟು ಹೋಗಿದ್ದರಿಂದ ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು.
ಇದನ್ನೂ ಓದಿ |13ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ಸಿದ್ದರಾಮಯ್ಯ, ಡಿಕೆಶಿ, ಖರ್ಗೆ
ಲೀಗಲ್ ಆದ್ರೆ ಬಿಟ್ಟು ಹೋಗಿದ್ದೇಕೆ? | ವಿಮಾನ ನಿಲ್ದಾಣ ಕಾಮಗಾರಿ ಪ್ರದೇಶದಲ್ಲಿ ಕ್ವಾರಿಗೆ ಪರವಾನಗಿ ಇದೆ. ಆದರೆ, ಹುಣಸೋಡು ಪ್ರಕರಣದ ಬಳಿಕ ಸ್ಫೋಟಕ ಪೂರೈಕೆ ಸೇರಿದಂತೆ ಅದನ್ನು ಸ್ಫೋಟಿಸುವ ನಿಟ್ಟಿನಲ್ಲಿ ಭಾರಿ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಚಿಕ್ಕಬಳ್ಳಾಪುರದ ಕಂಪೆನಿಯವರು ಜಿಲ್ಲಾಡಳಿತಕ್ಕೆ ಈ ಸಂಬಂಧ ಪರವಾನಗಿ ಕೇಳಿದ್ದರು ಎನ್ನಲಾಗಿದೆ. ಆದರೆ, ಮಂಗಳೂರಿನ ಪೆಟ್ರೋಲಿಯಂ ಮತ್ತು ಸ್ಫೋಟಕಗಳ ಸುರಕ್ಷತಾ ಸಂಸ್ಥೆ (ಪಿಇಎಸ್ಒ)ಯಿಂದ ಅನುಮತಿಗೆ ಡಿಸಿ ಕೂಡ ಸೂಚನೆ ನೀಡಿದ್ದಾರೆ. ಆದರೆ, ಪರ್ಮಿಷನ್ ಗಾಗಿ ಕೋರಿರುವ ಕಂಪೆನಿಯಿಂದ ಕೆಲವು ನಿಯಮಗಳು ಉಲ್ಲಂಘನೆ ಆಗಿರುವುದು ಬೆಳಕಿಗೆ ಬಂದಿದೆ. ಈ ಕಾರಣದಿಂದಾಗಿ, ಸ್ಫೋಟಕಗಳನ್ನು ಸ್ಥಳದಲ್ಲೇ ಬಿಟ್ಟು ಹೋಗಿರುವುದು ಗಮನಕ್ಕೆ ಬಂದಿದೆ.