ಸುದ್ದಿ ಕಣಜ.ಕಾಂ
ಬೆಂಗಳೂರು: ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ನಡೆಸಲು ಉದ್ದೇಶಿಸಲಾಗಿದ್ದ ಪರೀಕ್ಷೆಗಳನ್ನು ಮುಂದೂಡಿ ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
ಮಾರ್ಚ್ 20 ಮತ್ತು 21 ರಂದು ನಡೆಸಲು ಉದ್ದೇಶಿಸಲಾಗಿದ್ದ ಕಡ್ಡಾಯ ಕನ್ನಡ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಿದ್ದು, ಶೀಘ್ರವೇ ಪರಿಷ್ಕøತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಎರಡನೇ ಸಲ ಮುಂದೂಡಿಕೆ | ಪರೀಕ್ಷೆಯನ್ನು ಎರಡನೇ ಸಲ ಮುಂದೂಡಿ ಆದೇಶಿಸಲಾಗಿದೆ. ಈ ಮುಂಚೆ 2020ರ ಜೂನ್ 6 ಮತ್ತು ಏಳರಂದು ಕ್ರಮವಾಗಿ ಕಡ್ಡಾಯ ಕನ್ನಡ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕೋವಿಡ್ ನಿಂದಾಗಿ ಪರೀಕ್ಷೆ ಸುರಕ್ಷತೆ ದೃಷ್ಟಿಯಿಂದ ಮುಂದೂಡಲಾಗಿತ್ತು. ಏತನ್ಮಧ್ಯೆ, 2020ರ ಜನವರಿ 24ರಂದು ನಡೆಯಬೇಕಿದ್ದ ಪರೀಕ್ಷೆ ಪ್ರಥಮ ದರ್ಜೆ ಸಹಾಯಕರು, ಸಹಾಯಕರ ಹುದ್ದೆಗಳ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿ 2021ರ ಫೆಬ್ರವರಿ 28ರಂದು ನಡೆಸಲಾಗಿದೆ. ಹೀಗಾಗಿ, ಎಸ್.ಡಿ.ಎ ಪರೀಕ್ಷೆ ಮುಂದೂಡಲಾಗಿದೆ.