ಸುದ್ದಿ ಕಣಜ.ಕಾಂ
ಶಿವಮೊಗ್ಗ: ಎಂ.ಪಿ.ಎಂ. ಹಾಗೂ ವಿ.ಐ.ಎಸ್.ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಬಗ್ಗೆ ಅಧಿಕಾರಿಗಳ ಜೊತೆ ಸಂಸದ ಬಿ.ವೈ.ರಾಘವೇಂದ್ರ ಅವರು ಸೋಮವಾರ ಸಭೆ ನಡೆಸಿ ಚರ್ಚಿಸಿದರು.
ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!
ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆಗಳಲ್ಲೊಂದಾಗಿರುವ ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆ ಪುನಶ್ಚೇತನಗೊಳಿಸಲು ಯತ್ನಿಸಲಾಗಿದ್ದು, ಈ ಸಂಬಂಧ ಇತ್ತೀಚಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾತಾಮನ್ ಅವರನ್ನು ಭೇಟಿ ಮಾಡಿ ಮಾಡಿಕೊಳ್ಳಲಾಗಿದೆ. ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಖಾಸಗಿ ವ್ಯವಸ್ಥೆಯಲ್ಲಿ ನಡೆಸಲು ಟೆಂಡರ್ | ಇದಲ್ಲದೇ, ಎಂಪಿಎಂ ಕಾರ್ಖಾನೆಯನ್ನು ಖಾಸಗಿ ವ್ಯವಸ್ಥೆಯಲ್ಲಿ ನಡೆಸಲು ಈಗಾಗಲೇ ಟೆಂಡರ್ ಕರೆದಿದ್ದು ಶೀಘ್ರ ಒಂದು ಹಂತಕ್ಕೆ ಬರಲಿದೆ. ಈ ಹಿನ್ನೆಲೆಯಲ್ಲಿ ಚರ್ಚೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಕೈಗಾರಿಕಾ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಆಯುಕ್ತ ಗುಂಜನ್ ಕೃಷ್ಣ, ಪರಿಸರ ಅಧಿಕಾರಿ ಶ್ರೀನಿವಾಸ್ ಉಪಸ್ಥಿತರಿದ್ದರು.
https://www.suddikanaja.com/2021/03/14/action-to-revive-visl-factory-mp-by-raghavendra-said/