ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದಲ್ಲಿ ಪದೇ ಪದೆ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಇದರಿಂದ ಬೇಸಿಗೆಯಲ್ಲಿ ಭಾರಿ ಸಮಸ್ಯೆಯಾಗುತ್ತಿದೆ. ಕೂಡಲೇ ಈ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ.ಯೋಗೇಶ್ ನೇತೃತ್ವದಲ್ಲಿ ಮೆಸ್ಕಾಂ ಅಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!
ಕಾಮಗಾರಿ ಇನ್ನಿತರ ಕಾರಣಗಳಿಂದಾಗಿ ಪ್ರತಿ ದಿನ ಕರೆಂಟ್ ಕಡಿತಗೊಳಿಸುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಮೆಸ್ಕಾಂ ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಮುನ್ಸೂಚನೆ ಇಲ್ಲದೆ ವಿದ್ಯುತ್ ಸಂಪರ್ಕ ಕಡಿತವಾಗುತ್ತಿದ್ದು, ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ಗಾಜನೂರು ಸಮೀಪದ ಪಂಪ್ಹೌಸ್ನಲ್ಲಿ ವಿದ್ಯುತ್ ಇಲ್ಲದಿದ್ದರೆ ಇಡೀ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಪಾಲಿಕೆ ಸದಸ್ಯರಾದ ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಶಮೀರ್ ಖಾನ್, ಮುಖಂಡರಾದ ಕೆ.ರಂಗನಾಥ್, ರಂಗೇಗೌಡ ಉಪಸ್ಥಿತರಿದ್ದರು.