ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಿಲಕ ನಗರದ ಎರಡನೇ ಕ್ರಾಸಿನಲ್ಲಿರುವ ಶ್ರೀ ಪರಮ ಹಂಸ ನಿವಾಸದಲ್ಲಿ ಮಾರ್ಚ್ 20ರಂದು ಭಗವಾನ್ ಶ್ರೀರಾಮಕೃಷ್ಣ ಪರಮಹಂಸರ 186ನೇ ಜನ್ಮದಿನೋತ್ಸವ ಆಚರಿಸಲಾಗುತ್ತಿದೆ.
ಇದನ್ನೂ ಓದಿ | ಕೆಜಿಎಫ್ ಚಾಪ್ಟರ್ 2, ಯುವರತ್ನ ಉಚಿತವಾಗಿ ನೋಡುವ ಸುವರ್ಣಾವಕಾಶ
ಪ್ರತಿ ವರ್ಷ ಆಯೋಜಿಸಲಾಗುವ ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ರಕ್ಷಣಾಧಿಕಾರಿ ರವಿ ಡಿ.ಚನ್ನಣ್ಣನವರ್ ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕ ಎಚ್.ಎ.ಭವೇಂದ್ರ ಕುಮಾರ್ ತಿಳಿಸಿದ್ದಾರೆ.
ಅಂದು ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರಾದಾಶ್ರಮದ ಅಧ್ಯಕ್ಷ ಶ್ರೀಮದ್ ಸ್ವಾಮಿ ಬೋಧಸ್ವರೂಪಾನಂದಾಜೀ ಮಹಾರಾಜ್, ತುಮಕೂರಿನ ವಿವೇಕಾನಂದಾಶ್ರಮದ ಮುಖ್ಯಸ್ಥ ಶ್ರೀ ಸ್ವಾಮಿ ವೀರೇಶಾನಂದ ಸರಸ್ವತಿ, ಶಿವಮೊಗ್ಗದ ರಾಮಕೃಷ್ಣ ವಿವೇಕಾನಂದ ಆಶ್ರಮದ ಮುಖ್ಯಸ್ಥ ಶ್ರೀ ಸ್ವಾಮಿ ವಿನಯಾನಂದ ಸರಸ್ವತಿ ಸಾನ್ನಿಧ್ಯ ವಹಿಸಲಿದ್ದಾರೆ.