ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡ ರಾಕೇಶ್ ಟಿಕಾಯತ್ ಅವರ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಇತ್ತೀಚೆಗೆ ನಗರದ ಸೈನ್ಸ್ ಮೈದಾನದಲ್ಲಿ ಆಯೋಜಿಸಿದ್ದ ರೈತ ಮಹಾ ಪಂಚಾಯತ್ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆಂಬ ಕಾರಣಕ್ಕೆ ಪೊಲೀಸರು ಸು ಮೋಟೊ ಪ್ರಕರಣ ದಾಖಲಿಸಿದ್ದಾರೆ.
ರಾಕೇಶ್ ಟಿಕಾಯತ್ ಹೇಳಿದ್ದೇನು?
ರಾಕೇಶ್ ಟಿಕಾಯತ್ ಅವರು ವೇದಿಕೆಯಲ್ಲಿ ಭಾಷಣ ಮಾಡುವಾಗ ‘ಕರ್ನಾಟಕದ ಒಳಗೊಂದು ದೆಹಲಿ ಮಾಡಬೇಕಿದೆ. ಬೆಂಗಳೂರನ್ನು ದೆಹಲಿಯಾಗಿ ಮಾಡಬೇಕಿದೆ. ದೆಹಲಿಯ ನಾಲ್ಕು ದಿಕ್ಕುಗಳಲ್ಲಿ 25ರಿಂದ 30 ಸಾವಿರ ಟ್ರಾಕ್ಟರ್ ನಿಲ್ಲಿಸಲಾಗಿದೆ. ಕರ್ನಾಟಕದಲ್ಲೂ ಈ ಮಾದರಿಯ ಚಳವಳಿಯ ಅಗತ್ಯವಿದೆ. ಆಂದೋಲನ ಟ್ರಾಕ್ಟರ್ ಮೂಲಕ ನಡೆಯಬೇಕೇ ವಿನಹ ಗಾಡಿಗಳಿಂದಲ್ಲ’ ಎಂದು ಹೇಳಿದ್ದರು. ಈ ಹೇಳಿಕೆ ಪ್ರಚೋದನಕಾರಿ ರೀತಿಯಲ್ಲಿದೆ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ.
ಹೇಳಿಕೆ ದೋಂಬಿಗೆ ಪ್ರೇರಣೆ ನೀಡುವಂತಿದೆ ಎಂಬ ಕಾರಣಕ್ಕೆ ಕೋಟೆ ಪೊಲೀಸ್ ಠಾಣೆಯಲ್ಲಿ ಸು ಮೋಟೊ ಪ್ರಕರಣ ದಾಖಲಾಗಿದೆ.
https://www.suddikanaja.com/2021/03/21/national-farmer-leader-rakeshtikait-and-others-press-meet-in-shivamogga/