ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಿಕಾರಿಪುರ ಪುರಸಭೆ, ಚುರ್ಚುಗುಂಡಿ ಮತ್ತು ತರಲಘಟ್ಟ ಗ್ರಾಮ ಪಂಚಾಯಿತಿ, ಭದ್ರಾವತಿ ತಾಲ್ಲೂಕಿನ ಕೋಮಾರನಹಳ್ಳಿ, ವೀರಾಪುರ ಗ್ರಾಪಂ ಚುನಾವಣೆ ಮಾರ್ಚ್ 27ರಂದು ನಡೆಯಲಿವೆ. ಹೀಗಾಗಿ, ಇವುಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮಾರ್ಚ್ 27ರ ಸಂಜೆ 5 ಗಂಟೆಯಿಂದ 29ರ ಸಂಜೆ 5 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಮತ ಎಣಿಕೆಯಂದೂ 144 | ಮಾರ್ಚ್ 31ರಂದು ಭದ್ರಾವತಿ ಮತ್ತು ಶಿಕಾರಿಪುರ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕೇಂದ್ರದ 100 ಮೀಟರ್ ವರೆಗೆ 31ರಂದು ಬೆಳಗ್ಗೆ 6ರಿಂದ ಏಪ್ರಿಲ್ 1ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.